<p><strong>ಮಡಿಕೇರಿ:</strong> ನಗರದ ಮ್ಯಾನ್ಸ್ ಕಾಂಪೌಂಡ್ ಕ್ಲಬ್ನ ಸುವರ್ಣ ಮಹೋತ್ಸವ ಅಂಗವಾಗಿ ಮೇ 25 ಮತ್ತು 26ರಂದು ಜಿಲ್ಲಾ ಕ್ರಿಡಾಂಗಣದಲ್ಲಿ ಜಿಲ್ಲಾಮಟ್ಟದ ಫುಟ್ಬಾಲ್ ಟೂರ್ನಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಕ್ರಿಸ್ಟೋಫರ್ ತಿಳಿಸಿದರು.</p>.<p>1968ರಲ್ಲಿ ಆರಂಭವಾದ ಕ್ಲಬ್, 2018ಕ್ಕೆ 50 ವರ್ಷ ಪೂರೈಸಿದೆ. ಈ ನೆನಪಿಗಾಗಿ ಎರಡು ದಿನಗಳ ಜಿಲ್ಲಾಮಟ್ಟದ ಟೂರ್ನಿಯನ್ನು ಆಯೋಜಿಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಟೂರ್ನಿಯಲ್ಲಿ 26 ತಂಡಗಳಿಗೆ ಅವಕಾಶ ನೀಡಲು ಉದ್ದೇಶಿದ್ದು, ಮೊದಲು ನೋಂದಾಯಿಸಿಕೊಂಡ ತಂಡಗಳಿಗೆ ಟೂರ್ನಿ ನಡೆಯಲಿದೆ. ಪ್ರತಿ ತಂಡಕ್ಕೆ ₹ 2 ಸಾವಿರ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಆಸಕ್ತ ತಂಡಗಳು ಮೇ 22ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಟೂರ್ನಿಯಲ್ಲಿ ವಿಜೇತ ತಂಡಕ್ಕೆ ಪ್ರಥಮ ಸ್ಥಾನ ₹ 22 ಸಾವಿರ ನಗದು, ದ್ವಿತೀಯ ಸ್ಥಾನಕ್ಕೆ ₹13 ಸಾವಿರ ನಗದು ಹಾಗೂ ಟ್ರೋಫಿ ವಿತರಣೆ ಮಾಡಲಾಗುವುದು. ಜತೆಗೆ ಅತ್ಯುತ್ತಮ ಗೋಲ್ ಕೀಪರ್, ಅತ್ಯುತ್ತಮ ಆಟಗಾರ ಸೇರಿದಂತೆ ವೈಯಕ್ತಿಕ ಬಹುಮಾನಗಳನ್ನೂ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಮಾಹಿತಿಗೆ ಮೊ: 70199 09495, 94489 76406 ಸಂಪರ್ಕಿಸಬಹುದು. </p>.<p>ಸುದ್ದಿಗೋಷ್ಠಿಯಲ್ಲಿ ಎಂಸಿಸಿ ಕಾರ್ಯದರ್ಶಿ ಪಿ. ಉಮೇಶ್ ಕುಮಾರ್, ಖಜಾಂಚಿ ಪೀಟರ್, ಹಿರಿಯ ಆಟಗಾರ ಎನ್.ಕೆ. ರವೀಂದ್ರ, ಸದಸ್ಯ ಬಿ.ಜೆ. ಮನೋಜ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ನಗರದ ಮ್ಯಾನ್ಸ್ ಕಾಂಪೌಂಡ್ ಕ್ಲಬ್ನ ಸುವರ್ಣ ಮಹೋತ್ಸವ ಅಂಗವಾಗಿ ಮೇ 25 ಮತ್ತು 26ರಂದು ಜಿಲ್ಲಾ ಕ್ರಿಡಾಂಗಣದಲ್ಲಿ ಜಿಲ್ಲಾಮಟ್ಟದ ಫುಟ್ಬಾಲ್ ಟೂರ್ನಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಕ್ರಿಸ್ಟೋಫರ್ ತಿಳಿಸಿದರು.</p>.<p>1968ರಲ್ಲಿ ಆರಂಭವಾದ ಕ್ಲಬ್, 2018ಕ್ಕೆ 50 ವರ್ಷ ಪೂರೈಸಿದೆ. ಈ ನೆನಪಿಗಾಗಿ ಎರಡು ದಿನಗಳ ಜಿಲ್ಲಾಮಟ್ಟದ ಟೂರ್ನಿಯನ್ನು ಆಯೋಜಿಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಟೂರ್ನಿಯಲ್ಲಿ 26 ತಂಡಗಳಿಗೆ ಅವಕಾಶ ನೀಡಲು ಉದ್ದೇಶಿದ್ದು, ಮೊದಲು ನೋಂದಾಯಿಸಿಕೊಂಡ ತಂಡಗಳಿಗೆ ಟೂರ್ನಿ ನಡೆಯಲಿದೆ. ಪ್ರತಿ ತಂಡಕ್ಕೆ ₹ 2 ಸಾವಿರ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಆಸಕ್ತ ತಂಡಗಳು ಮೇ 22ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಟೂರ್ನಿಯಲ್ಲಿ ವಿಜೇತ ತಂಡಕ್ಕೆ ಪ್ರಥಮ ಸ್ಥಾನ ₹ 22 ಸಾವಿರ ನಗದು, ದ್ವಿತೀಯ ಸ್ಥಾನಕ್ಕೆ ₹13 ಸಾವಿರ ನಗದು ಹಾಗೂ ಟ್ರೋಫಿ ವಿತರಣೆ ಮಾಡಲಾಗುವುದು. ಜತೆಗೆ ಅತ್ಯುತ್ತಮ ಗೋಲ್ ಕೀಪರ್, ಅತ್ಯುತ್ತಮ ಆಟಗಾರ ಸೇರಿದಂತೆ ವೈಯಕ್ತಿಕ ಬಹುಮಾನಗಳನ್ನೂ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಮಾಹಿತಿಗೆ ಮೊ: 70199 09495, 94489 76406 ಸಂಪರ್ಕಿಸಬಹುದು. </p>.<p>ಸುದ್ದಿಗೋಷ್ಠಿಯಲ್ಲಿ ಎಂಸಿಸಿ ಕಾರ್ಯದರ್ಶಿ ಪಿ. ಉಮೇಶ್ ಕುಮಾರ್, ಖಜಾಂಚಿ ಪೀಟರ್, ಹಿರಿಯ ಆಟಗಾರ ಎನ್.ಕೆ. ರವೀಂದ್ರ, ಸದಸ್ಯ ಬಿ.ಜೆ. ಮನೋಜ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>