<p><strong>ಕುಶಾಲನಗರ: </strong>‘ಕುಶಾಲನಗರ ತಾಲ್ಲೂಕು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೊಡುಗೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಬಿ.ಗಣೇಶ್ ಹೇಳಿದರು.</p>.<p>‘ತಾಲ್ಲೂಕು ರಚನೆ ನಮ್ಮ ಸಾಧನೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿಯವರು ಬಿಂಬಿಸಿಕೊಳ್ಳುತ್ತಿರುವುದು ಶೋಭೆ ತರುವ ವಿಚಾರವಲ್ಲ’ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕೊಡಗಿಗೆ ಚುನಾವಣಾ ಪ್ರಚಾರಕ್ಕೆ ಬಂದ ವೇಳೆ ಕುಮಾರಸ್ವಾಮಿ ಅವರು ಭರವಸೆ ನೀಡಿದಂತೆ ಮುಖ್ಯಮಂತ್ರಿಯಾದಾಗ ಕುಶಾಲನಗರ ಮತ್ತು ಪೊನ್ನಂಪೇಟೆಯನ್ನು ನೂತನ ತಾಲ್ಲೂಕಾಗಿ ಘೋಷಣೆ ಮಾಡಿದರು. ನಂತರ ಬಂದ ಸರ್ಕಾರ<br />ಮುಂದುವರೆದ ಕ್ರಮಗಳನ್ನ ಕೈಗೊಂಡಿದೆ ಅಷ್ಟೆ. ಕಾವೇರಿ ತಾಲ್ಲೂಕು ರಚನೆಗೆ ಪಕ್ಷಾತೀತವಾಗಿ ಹೋರಾಟ ನಡೆದಿದೆಯೇ ಹೊರತು ಯಾವುದೇ ಒಂದು ಪಕ್ಷದ ಸಾಧನೆಯಲ್ಲ’ ಎಂದರು.</p>.<p>‘ಜಿಲ್ಲೆಗೆ ಬಿಜೆಪಿಯ ಕೊಡುಗೆ ಏನೂ ಇಲ್ಲ. ಭೂಕುಸಿತ ಸಂದರ್ಭ ಮನೆ ಕಳೆದುಕೊಂಡವರಿಗೆ ಸೂರು ಒದಗಿಸಿದ ಭಾಗ್ಯ ಕುಮಾರಸ್ವಾಮಿ ಅವರಿಗೆ ಸಲ್ಲಬೇಕು. ಮೂರು ವರ್ಷಗಳಿಂದ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದ್ದರೂ ಇದುವರೆಗೆ ಹೂಳೆತ್ತುವ ಕಾರ್ಯ ಸಮರ್ಪಕವಾಗಿ ಆಗಿಲ್ಲ’ ಎಂದು ಅವರು ಆರೋಪಿಸಿದರು.</p>.<p>‘ತಾಲ್ಲೂಕು ಉದ್ಘಾಟನೆ ಸಂದರ್ಭ ಸೌಜನ್ಯಕ್ಕಾದರೂ ಹೋರಾಟಗಾರರನ್ನು ಸ್ಮರಿಸಿಕೊಳ್ಳದೆ ಸರ್ಕಾರಿ ಕಾರ್ಯಕ್ರ ಮವನ್ನು ಶಾಸಕರು ಬಿಜೆಪಿ ಕಾರ್ಯಕ್ರಮವಾಗಿಸಿದ್ದು ಸರಿಯಲ್ಲ’ ಎಂದು ಗಣೇಶ್ ಟೀಕಿಸಿದರು.</p>.<p>ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ, ‘19 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೋರಾಟ ಸಮಿತಿಗಳು ಒಗ್ಗೂಡಿ ಮುಂಬರುವ ದಿನಗಳಲ್ಲಿ ತಾಲ್ಲೂಕು ರಚನೆ ಸಂಭ್ರಮ ಆಚರಿಸಿ ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಖ್ ಖಾನ್, ಖಜಾಂಚಿ ಡೆನ್ನಿ ಬರೋಸ್, ಎಪಿಎಂಸಿ ನಿರ್ದೇಶಕ ರಾಮಚಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ: </strong>‘ಕುಶಾಲನಗರ ತಾಲ್ಲೂಕು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೊಡುಗೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಬಿ.ಗಣೇಶ್ ಹೇಳಿದರು.</p>.<p>‘ತಾಲ್ಲೂಕು ರಚನೆ ನಮ್ಮ ಸಾಧನೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿಯವರು ಬಿಂಬಿಸಿಕೊಳ್ಳುತ್ತಿರುವುದು ಶೋಭೆ ತರುವ ವಿಚಾರವಲ್ಲ’ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕೊಡಗಿಗೆ ಚುನಾವಣಾ ಪ್ರಚಾರಕ್ಕೆ ಬಂದ ವೇಳೆ ಕುಮಾರಸ್ವಾಮಿ ಅವರು ಭರವಸೆ ನೀಡಿದಂತೆ ಮುಖ್ಯಮಂತ್ರಿಯಾದಾಗ ಕುಶಾಲನಗರ ಮತ್ತು ಪೊನ್ನಂಪೇಟೆಯನ್ನು ನೂತನ ತಾಲ್ಲೂಕಾಗಿ ಘೋಷಣೆ ಮಾಡಿದರು. ನಂತರ ಬಂದ ಸರ್ಕಾರ<br />ಮುಂದುವರೆದ ಕ್ರಮಗಳನ್ನ ಕೈಗೊಂಡಿದೆ ಅಷ್ಟೆ. ಕಾವೇರಿ ತಾಲ್ಲೂಕು ರಚನೆಗೆ ಪಕ್ಷಾತೀತವಾಗಿ ಹೋರಾಟ ನಡೆದಿದೆಯೇ ಹೊರತು ಯಾವುದೇ ಒಂದು ಪಕ್ಷದ ಸಾಧನೆಯಲ್ಲ’ ಎಂದರು.</p>.<p>‘ಜಿಲ್ಲೆಗೆ ಬಿಜೆಪಿಯ ಕೊಡುಗೆ ಏನೂ ಇಲ್ಲ. ಭೂಕುಸಿತ ಸಂದರ್ಭ ಮನೆ ಕಳೆದುಕೊಂಡವರಿಗೆ ಸೂರು ಒದಗಿಸಿದ ಭಾಗ್ಯ ಕುಮಾರಸ್ವಾಮಿ ಅವರಿಗೆ ಸಲ್ಲಬೇಕು. ಮೂರು ವರ್ಷಗಳಿಂದ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದ್ದರೂ ಇದುವರೆಗೆ ಹೂಳೆತ್ತುವ ಕಾರ್ಯ ಸಮರ್ಪಕವಾಗಿ ಆಗಿಲ್ಲ’ ಎಂದು ಅವರು ಆರೋಪಿಸಿದರು.</p>.<p>‘ತಾಲ್ಲೂಕು ಉದ್ಘಾಟನೆ ಸಂದರ್ಭ ಸೌಜನ್ಯಕ್ಕಾದರೂ ಹೋರಾಟಗಾರರನ್ನು ಸ್ಮರಿಸಿಕೊಳ್ಳದೆ ಸರ್ಕಾರಿ ಕಾರ್ಯಕ್ರ ಮವನ್ನು ಶಾಸಕರು ಬಿಜೆಪಿ ಕಾರ್ಯಕ್ರಮವಾಗಿಸಿದ್ದು ಸರಿಯಲ್ಲ’ ಎಂದು ಗಣೇಶ್ ಟೀಕಿಸಿದರು.</p>.<p>ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ, ‘19 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೋರಾಟ ಸಮಿತಿಗಳು ಒಗ್ಗೂಡಿ ಮುಂಬರುವ ದಿನಗಳಲ್ಲಿ ತಾಲ್ಲೂಕು ರಚನೆ ಸಂಭ್ರಮ ಆಚರಿಸಿ ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಖ್ ಖಾನ್, ಖಜಾಂಚಿ ಡೆನ್ನಿ ಬರೋಸ್, ಎಪಿಎಂಸಿ ನಿರ್ದೇಶಕ ರಾಮಚಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>