ಮಂಗಳೂರು, ಮೈಸೂರು, ಕೊಣನೂರು, ಹಾಸನ, ರಾಮನಾಥಪುರ, ಚನ್ನರಾಯಪಟ್ಟಣ, ಅರಕಲಗೂಡು ಸೇರಿದಂತೆ ಹಲವು ಸ್ಥಳಗಳಿಂದ ಮಡಿಕೇರಿಗೆ ದಿನಸಿ ಪದಾರ್ಥ ಹಾಗೂ ತರಕಾರಿಗಳನ್ನು ವ್ಯಾಪಾರಕ್ಕೆಂದು ತರುತ್ತಾರೆ. ಆದರೆ, ಇಲ್ಲಿ ಸೂಕ್ತ ವ್ಯವಸ್ಥೆಯೇ ಇಲ್ಲದೇ ಸಂಕಟ ಪಡುವ ಸ್ಥಿತಿಯಿದೆ. ಬೇಸಿಗೆಯಲ್ಲಿ ಬಿಸಿಲಿನಲ್ಲಿ ಒಣಗುತ್ತಾ, ಮಳೆಗಾಲದಲ್ಲಿ ಮಳೆಯಲ್ಲಿ ನಡುಗುತ್ತಾ ವ್ಯಾಪಾರ ನಡೆಸಬೇಕಾದ ಪರಿಸ್ಥಿತಿಯಿದೆ.