ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆಯಲ್ಲಿ ಅನುತ್ತೀರ್ಣದ ಭಯ: ವಿದ್ಯಾರ್ಥಿನಿ ಆತ್ಮಹತ್ಯೆ

Last Updated 12 ಮಾರ್ಚ್ 2019, 17:08 IST
ಅಕ್ಷರ ಗಾತ್ರ

ಮಡಿಕೇರಿ: ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಭಯದಿಂದ ಮರಗೋಡು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತಾಲ್ಲೂಕಿನ ಹೊಸಕೇರಿ ಗ್ರಾಮದ ಎಂ.ಸಿ.ಜಸ್ಮಿತಾ (14) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಗಣಿತ ವಿಷಯದ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ, ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಗಳು ರಾತ್ರಿಯಾದರೂ ಮನೆಗೆ ಬಾರದಿದ್ದ ಕಾರಣ ಆತಂಕಗೊಂಡ ಪೋಷಕರು ಮಗಳಿಗಾಗಿ ಹುಡುಕಾಟ ನಡೆಸಿದರು. ಮಂಗಳವಾರ ಬೆಳಿಗ್ಗೆ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ.

ಡೆತ್‌ನೋಟ್‌ನಲ್ಲಿ ಏನಿದೆ?: ‘ಅಪ್ಪ–ಅಮ್ಮ ನೀವು ನನ್ನನ್ನು ಚೆನ್ನಾಗಿ ಓದಿಸಬೇಕು ಅಂತ ಆಸೆ ಇಟ್ಟುಕೊಂಡಿದ್ದೀರಿ. ಆದರೆ, ನನಗೆ ಓದಲು ಸಾಧ್ಯವಾಗಲಿಲ್ಲ. 9ನೇ ತರಗತಿ ಪಾಸ್‌ ಆಗುವುದಿಲ್ಲ. ಮರ್ಯಾದೆ ಹೋಗಿದೆ. ಆದ್ದರಿಂದ ಎಲ್ಲಾದರೂ ಹೋಗಬೇಕು ಎಂದು ನಿರ್ಧರಿಸಿದ್ದೇನೆ...’ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT