ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿಯಾಗಲು ಪ್ರತಾಪ ಸಿಂಹ ಅರ್ಹತೆಯನ್ನೇ ಕಳೆದುಕೊಂಡಿದ್ದಾರೆ. ಸಂಸದರ ಹೆಸರಿನಲ್ಲಿ ಕಾನೂನು ಭಕ್ಷಕರಾಗಿ ಮೆರೆದವರು, ಹನುಮಾನ್ ಜಯಂತಿ ಸಂದರ್ಭದಲ್ಲಿ ಕಾನೂನು ಕೈಗೆತ್ತಿಕೊಂಡು ದರ್ಪ ತೋರುವವರನ್ನು ಚುನಾವಣೆಯಲ್ಲಿಗೆಲ್ಲಿಸಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.