<p><strong>ಮಡಿಕೇರಿ:</strong> ಜಿಲ್ಲಾ ಮೊಗೇರ ಸೇವಾ ಸಮಾಜದ ವತಿಯಿಂದ ಮೇ 3ರಿಂದ 5ರವರೆಗೆ ನಗರದ ಜನರಲ್ ತಿಮ್ಮಯ್ಯ ಕ್ರಿಡಾಂಗಣದಲ್ಲಿ ರಾಜ್ಯಮಟ್ಟದ ‘ಜೈ ಜವಾನ್ ಟ್ರೋಫಿ’ ಕ್ರಿಕೆಟ್ ಹಾಗೂ ಥ್ರೋಬಾಲ್ ಟೂರ್ನಿ ನಡೆಯಲಿದೆ ಎಂದು ಜಿಲ್ಲಾ ಮೊಗೇರ ಸೇವಾ ಸಮಾಜದ ಗೌರವಾಧ್ಯಕ್ಷ ಪಿ.ಎಂ. ರವಿ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನಾಂಗ ಬಾಂಧವರನ್ನು ಸಂಘಟನೆ ಮಾಡುವ ದೃಷ್ಟಿಯಿಂದ ಪ್ರತಿವರ್ಷವೂ ಕ್ರೀಡಾಕೂಟ ನಡೆಸಿಕೊಂಡು ಬರಲಾಗುತ್ತಿದ್ದು, ಕ್ರಿಕೆಟ್ ಟೂರ್ನಿಯ ವಿಜೇತ ₹ 20 ಸಾವಿರ ಹಾಗೂ ದ್ವೀತಿಯ ತಂಡಕ್ಕೆ ₹ 10 ಸಾವಿರ ಹಾಗೂ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.</p>.<p>ತಂಡದಲ್ಲಿ 11+1 ಆಟಗಾರರು ಕಡ್ಡಾಯ, ಕ್ರಿಕೆಟ್ 6 ಓವರ್ಗಳಿಗೆ ಸೀಮಿತವಾಗಿದೆ ಎಂದು ತಿಳಿಸಿದರು.</p>.<p>ಕ್ರೀಡಾಕೂಟದಲ್ಲಿ ಗ್ರಾಮೀಣ ಕ್ರೀಡೆಗಳಾದ ಹಗ್ಗಜಗ್ಗಾಟ, ಕಾಳು ಹೆಕ್ಕುವುದು, ಓಟ, ನಿಂಬೆ ಓಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಾಹಿತಿಗೆ ಮೊಬೈಲ್: 94834 87528, 99640 60716 ಸಂಪರ್ಕಿಸಬಹುದು ಎಂದು ರವಿ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮೊಗೇರ ಸೇವಾ ಸಮಾಜದ ಪ್ರಧಾನ ಕಾರ್ಯದರ್ಶಿ ಎಂ.ಜಿ. ಚಂದ್ರ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪಿ.ಬಿ. ಸುರೇಶ್, ಖಜಾಂಜಿ ವಿವೇಕ್, ಮೊಗೇರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಪಿ.ಸಿ. ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಜಿಲ್ಲಾ ಮೊಗೇರ ಸೇವಾ ಸಮಾಜದ ವತಿಯಿಂದ ಮೇ 3ರಿಂದ 5ರವರೆಗೆ ನಗರದ ಜನರಲ್ ತಿಮ್ಮಯ್ಯ ಕ್ರಿಡಾಂಗಣದಲ್ಲಿ ರಾಜ್ಯಮಟ್ಟದ ‘ಜೈ ಜವಾನ್ ಟ್ರೋಫಿ’ ಕ್ರಿಕೆಟ್ ಹಾಗೂ ಥ್ರೋಬಾಲ್ ಟೂರ್ನಿ ನಡೆಯಲಿದೆ ಎಂದು ಜಿಲ್ಲಾ ಮೊಗೇರ ಸೇವಾ ಸಮಾಜದ ಗೌರವಾಧ್ಯಕ್ಷ ಪಿ.ಎಂ. ರವಿ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನಾಂಗ ಬಾಂಧವರನ್ನು ಸಂಘಟನೆ ಮಾಡುವ ದೃಷ್ಟಿಯಿಂದ ಪ್ರತಿವರ್ಷವೂ ಕ್ರೀಡಾಕೂಟ ನಡೆಸಿಕೊಂಡು ಬರಲಾಗುತ್ತಿದ್ದು, ಕ್ರಿಕೆಟ್ ಟೂರ್ನಿಯ ವಿಜೇತ ₹ 20 ಸಾವಿರ ಹಾಗೂ ದ್ವೀತಿಯ ತಂಡಕ್ಕೆ ₹ 10 ಸಾವಿರ ಹಾಗೂ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.</p>.<p>ತಂಡದಲ್ಲಿ 11+1 ಆಟಗಾರರು ಕಡ್ಡಾಯ, ಕ್ರಿಕೆಟ್ 6 ಓವರ್ಗಳಿಗೆ ಸೀಮಿತವಾಗಿದೆ ಎಂದು ತಿಳಿಸಿದರು.</p>.<p>ಕ್ರೀಡಾಕೂಟದಲ್ಲಿ ಗ್ರಾಮೀಣ ಕ್ರೀಡೆಗಳಾದ ಹಗ್ಗಜಗ್ಗಾಟ, ಕಾಳು ಹೆಕ್ಕುವುದು, ಓಟ, ನಿಂಬೆ ಓಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಾಹಿತಿಗೆ ಮೊಬೈಲ್: 94834 87528, 99640 60716 ಸಂಪರ್ಕಿಸಬಹುದು ಎಂದು ರವಿ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮೊಗೇರ ಸೇವಾ ಸಮಾಜದ ಪ್ರಧಾನ ಕಾರ್ಯದರ್ಶಿ ಎಂ.ಜಿ. ಚಂದ್ರ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪಿ.ಬಿ. ಸುರೇಶ್, ಖಜಾಂಜಿ ವಿವೇಕ್, ಮೊಗೇರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಪಿ.ಸಿ. ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>