ಬೆಳಿಗ್ಗೆ 10ಕ್ಕೆ ಅರಣ್ಯ ಇಲಾಖೆ ವತಿಯಿಂದ ದಿಡ್ಡಳ್ಳಿ ನಿರಾಶ್ರಿತ ಕೇಂದ್ರದ ಸುತ್ತ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಲಯ ಅರಣ್ಯಾಧಿಕಾರಿ ಲಕ್ಷ್ಮಿಕಾಂತ್ ಚಾಲನೆ ನೀಡಲಿದ್ದಾರೆ. ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೃದ್ರೋಗ, ಸ್ತ್ರೀರೋಗ, ಚರ್ಮರೋಗ ಮತ್ತಿತರ ತಪಾಸಣೆಗಳು ನಡೆಯಲಿದೆ. ತಪಾಸಣೆಗಾಗಿ ಜೆಎಸ್ಎಸ್ ನುರಿತ ವೈದ್ಯರ ತಂಡ ಪಾಲ್ಗೊಳ್ಳಲಿದೆ ಎಂದು ಮಾಹಿತಿ ನೀಡಿದರು.