ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮಿ ಪ್ರಿಯಾ ಮಾತನಾಡಿ, ಈಗಾಗಲೇ 42 ಪುನರ್ವಸತಿ ಕೇಂದ್ರಗಳ ನಿರ್ವಹಣೆಗೆ ಬೇಕಾಗಿರುವ ಎಲ್ಲಾ ಅಗತ್ಯ ಸಿದ್ಧತೆಗಳನ್ನುಮಾಡಿಕೊಳ್ಳಲಾಗಿದ್ದು, ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸೂಕ್ಷ್ಮ ಪ್ರದೇಶದ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.