ಹೌದು, ಮಡಿಕೇರಿ ತಾಲ್ಲೂಕಿನ ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತಲೆಕಾಡು ಮುಖ್ಯರಸ್ತೆ ಬದಿಯಲ್ಲಿ ಎರಡು ದಿನದಿಂದ ಚರಂಡಿ ತೋಡುವ ಕೆಲಸಕ್ಕೆ ಲೋಕೋಪಯೋಗಿ ಇಲಾಖೆ ಮುಂದಾಗಿತ್ತು. ಗುರುವಾರ ಬೆಳಿಗ್ಗೆ ಜೆಸಿಬಿ ಯಂತ್ರದ ಮೂಲಕ ಕಾಮಗಾರಿ ನಡೆಸಲು ಬಂದಂತೆಯೇ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಕಾಮಗಾರಿ ನಡೆಸಬಾರದು ಎಂದು ಆಗ್ರಹಿಸಿದರು.