ಮಳೆಗಾಲ ಆರಂಭವಾಗಿ ಒಂದು ತಿಂಗಳು ಕಳೆದರೂ, ಮಳೆಯೂ ನಿರೀಕ್ಷಿಸಿದ ಮಟ್ಟದಲ್ಲಿ ಬರದ ಕಾರಣ ಹಲವೆಡೆಗಳಲ್ಲಿ ಕೃಷಿ ಕಾರ್ಯ ಕುಂಠಿತಗೊಂಡಿದೆ. ಸಾಮಾನ್ಯವಾಗಿ ಜುಲೈನಲ್ಲಿ ನಾಟಿ ಬಿತ್ತನೆ ಬೀಜಗಳನ್ನು ಹಾಕಲಾಗುತ್ತಿದ್ದು, ಜುಲೈ ಅಂತ್ಯದಲ್ಲಿ ಗದ್ದೆಯ ನಾಟಿ ಆರಂಭವಾಗಬೇಕಿತ್ತು. ಆದರೆ, ಸಿದ್ದಾಪುರ ಭಾಗದಲ್ಲಿ ಮಳೆಯ ಸಮಸ್ಯೆ ಎದುರಾಗಿರುವ ಕಾರಣ ಕೃಷಿ ಚಟುವಟಕೆಯೂ ಕೂಡ ವಿಳಂಬವಾಗುತ್ತಿದೆ. ಸಿದ್ದಾಪುರ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಕೃಷಿಕರು ಕಷ್ಟಪಟ್ಟು ನಾಟಿ ಮಾಡಿದರೂ, ಕಾಡಾನೆ ಹಾವಳಿಯಿಂದ ಕೃಷಿ ನಾಶವಾಗುತ್ತಿದ್ದು, ಪ್ರಸಕ್ತ ವರ್ಷ ನೀರಿನ ಕೊರತೆಯಿಂದ ಕೃಷಿ ಮಾಡಲು ಸಾಧ್ಯವೇ ಎಂಬ ಪ್ರಶ್ನೆಯೂ ಕೃಷಿಕರಲ್ಲಿ ಮೂಡಿದೆ.