ನಿವಾಸಿ ವೈ.ಎಂ.ಸುಬ್ರಮಣಿ ಮಾತನಾಡಿ, ‘ಮೂಲಸೌಲಭ್ಯಗಳು ದೊರೆತ ಪರಿಣಾಮ ಹೆಚ್ಚುವರಿ 28 ಆದಿವಾಸಿ ಕುಟುಂಬಗಳು ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿವೆ. 52 ಕುಟುಂಬಗಳು ಈ ಭಾಗದಲ್ಲಿ ನೆಲೆ ನಿಂತಿವೆ. ಆದರೆ, ಅರಣ್ಯ ಸಿಬ್ಬಂದಿಗಳು ಇದು ಅರಣ್ಯಕ್ಕೆ ಸೇರಿದ ಜಾಗವಾಗಿದ್ದು, ತಕ್ಷಣ ಸ್ಥಳಾಂತರಗೊಳ್ಳಿ ಎಂದು ಎಚ್ಚರಿಕೆ ನೀಡಿ ಹೋಗುತ್ತಿದ್ದಾರೆ’ ಎಂದು ಅಳಲು ತೋಡಿಕೊಂಡರು.