ವ್ಯಾಪಕ ಮಳೆಯಿಂದ ಸಾವು–ನೋವು, ಜಾನುವಾರುಗಳ ಜೀವಹಾನಿ, ಕೃಷಿ ಭೂಮಿ, ಕಾಫಿ ಬೆಳೆ, ರಸ್ತೆ, ಸೇತುವೆ, ಮನೆಗಳಿಗೆ ಹಾನಿ... ಹೀಗೆ ವ್ಯಾಪಕ ಹಾನಿ ಉಂಟಾಗಿದ್ದು, ಸರ್ಕಾರಕ್ಕೆ ನಷ್ಟದ ಪ್ರಾಥಮಿಕ ಅಂದಾಜು ಪಟ್ಟಿಯನ್ನು ನೀಡಬೇಕಿದೆ. ಅಧಿಕಾರಿಗಳು ಯಾವುದೇ ಲೋಪದೋಷ ಆಗದಂತೆ ನಿಯಮಾನುಸಾರ ಅಂದಾಜು ಪಟ್ಟಿ ಸಿದ್ಧಪಡಿಸಿ ತುರ್ತಾಗಿ ಸಲ್ಲಿಸಬೇಕು ಎಂದು ಹೇಳಿದರು.