ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ತೆನ್ನೀರಾ ಮೈನಾ ಮಾತನಾಡಿ, ‘ಇತ್ತೀಚೆಗೆ ಬಿಜೆಪಿಯ ಸಚಿವರೊಬ್ಬರು ಯಾರಿಗೆ ಯೋಗ್ಯತೆ ಇದೆಯೋ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಹೇಳಿದ್ದರು. ಆದರೆ, 4- 5 ಬಾರಿ ಗೆಲುವು ಸಾಧಿಸಿದ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡದಿರುವ ಇರುವುದರಿಂದ ಅವರಿಗೆ ಯೋಗ್ಯತೆ ಇಲ್ಲವೇ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ’ ಎಂದು ವ್ಯಂಗ್ಯವಾಡಿದರು.