ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ, ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಯುವಕ

ಸುಜಯ್‌ಗೆ ಅಭಿನಂದನೆಗಳ ಮಹಾಪೂರ
Last Updated 5 ಸೆಪ್ಟೆಂಬರ್ 2019, 19:30 IST
ಅಕ್ಷರ ಗಾತ್ರ

ಮಡಿಕೇರಿ: ರಸ್ತೆಯಲ್ಲಿ ಸಿಕ್ಕಿದ ಚಿನ್ನಾಭರಣ ಹಾಗೂ ನಗದನ್ನು ಅದರ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಮರಗೋಡು ಗ್ರಾಮದ ಯುವಕ ಬಡುವಂಡ್ರ ಸುಜಯ್ ಪ್ರಾಮಾಣಿಕತೆ ಮೆರೆದಿದ್ದಾರೆ.

ಹೊಸ್ಕೇರಿ ಸಮೀಪ ತೆರಳುತ್ತಿರುವಾಗ ರಸ್ತೆಯಲ್ಲಿ ಬ್ಯಾಗ್ ಸಿಕ್ಕಿದೆ. ಅದನ್ನು ಪರಿಶೀಲಿಸಿದಾಗ ಅದರಲ್ಲಿರಸ್ತೆಯಲ್ಲಿ ₹ 1.5 ಲಕ್ಷ ಮೌಲ್ಯದ ಚಿನ್ನಾಭರಣ, ₹ 17 ಸಾವಿರ ನಗದು ಇತ್ತು. ಬ್ಯಾಗ್‌ನಲ್ಲಿ ದೊರೆತ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ನಾಪೋಕ್ಲು ಗ್ರಾಮದ ಮಣಿಕಂಠ ಅವರು ಭಾರೀ ಮಳೆಗೆ ಹೆದರಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಮತ್ತು ದಾಖಲಾತಿ ತೆಗೆದುಕೊಂಡು ಸಂಬಂಧಿಕರ ಮನೆಗೆ ಹೊರಟಿದ್ದಾರೆ. ಆದರೆ, ಮಾರ್ಗಮಧ್ಯೆ ಅವರ ಈ ಬ್ಯಾಗ್ ಬಿದ್ದುಹೋಗಿತ್ತು. ಆ ಬ್ಯಾಗ್‌ ಸುಜಯ್‌ಗೆ ಸಿಕ್ಕಿತ್ತು. ಅದನ್ನು ಅವರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ.

ಮರಗೋಡು ವೈಷ್ಣವಿ ಫುಟ್‌ಬಾಲ್‌ ತಂಡದ ನಾಯಕ ಸುಜಯ್. ಪ್ರಾಮಾಣಿಕತೆ ಮೆರೆದ ಈ ಯುವಕನಿಗೆ ಊರಿನವರು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT