<p><strong>ಮಡಿಕೇರಿ:</strong> ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಗುರುವಾರದಿಂದ ಪದವಿ ಪರೀಕ್ಷೆಗಳು ಆರಂಭಗೊಂಡಿದ್ದು, ಹಾಜರಾತಿ ಕೊರತೆಯಾದ 70 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ.</p>.<p>ಪ್ರವೇಶ ಪತ್ರ ವಿತರಣೆ ಮಾಡದ ಕಾರಣ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.</p>.<p>ಆಡಳಿತ ಮಂಡಳಿ ಹಾಜರಾತಿ ಕೊರತೆಯ ನೆಪ ಹೇಳಿ ಪ್ರವೇಶ ಪತ್ರ ವಿತರಿಸಿಲ್ಲ ಎಂದು ವಿದ್ಯಾರ್ಥಿಗಳು ನೋವು ತೋಡಿಕೊಂಡರು.</p>.<p>ವಿವಿಧ ಪದವಿಯ 70 ವಿದ್ಯಾರ್ಥಿಗಳು 2, 4 ಹಾಗೂ 6ನೇ ಸೆಮಿಸ್ಟರ್ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ. ಕಾಲೇಜು ಪ್ರಾಂಶುಪಾಲ ತಿಮ್ಮಯ್ಯ ವಿರುದ್ಧ ಪರೀಕ್ಷಾ ವಂಚಿತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಆರೋಗ್ಯ ಸಮಸ್ಯೆಯಿಂದ ನನಗೆ ಹಾಜರಾತಿ ಕೊರತೆಯಾಗಿದೆ. ಪ್ರಾಂಶುಪಾಲರು ಅದನ್ನು ಒಪ್ಪಿಕೊಳ್ಳುತ್ತಿಲ್ಲ. ನಮ್ಮ ವಿದ್ಯಾಭ್ಯಾಸಕ್ಕೆ ಪ್ರಾಂಶುಪಾಲರೇ ಅಡ್ಡಿಯಾಗುತ್ತಿದ್ದಾರೆ. ಮಾನವೀಯ ನೆಲೆಯಲ್ಲಿ ಅವಕಾಶ ನೀಡಬೇಕಿತ್ತು’ ಎಂದು ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಯೊಬ್ಬ ನೋವು ತೋಡಿಕೊಂಡ.</p>.<p>‘ಮಂಗಳೂರು ವಿಶ್ವವಿದ್ಯಾಲಯದ ನಿಯಮದಂತೆ ಹಾಜರಾತಿ ಕಡ್ಡಾಯಗೊಳಿಸಿದ್ದೇವೆ. ಹಾಜರಾತಿ ಕೊರತೆಯಾಗಿದ್ದ 70 ವಿದ್ಯಾರ್ಥಿಗಳಿಗೆ ಮೂರು ತಿಂಗಳ ಮೊದಲೇ ಸೂಚನೆ ನೀಡಲಾಗಿತ್ತು. ಆದರೂ, ಹಾಜರಾತಿ ಕೊರತೆಯಾದ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳದೇ ಈಗ ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ಕಾಲೇಜು ಪ್ರಾಂಶುಪಾಲ ಟಿ.ಡಿ. ತಿಮ್ಮಯ್ಯ ತಿಳಿಸಿದರು.</p>.<p>ಎನ್ಸಿಸಿ, ಎನ್ಎಸ್ಎಸ್ ಹಾಗೂ ಪ್ರಾಕೃತಿಕ ವಿಕೋಪಕ್ಕೆ ಒಳಗಾದ ಸಂತ್ರಸ್ತ ವಿದ್ಯಾರ್ಥಿಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದೂ ಪ್ರತಿಕ್ರಿಯಿಸಿದರು. ಪಿಎಸ್ಐ ಷಣ್ಮುಗಂ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಗುರುವಾರದಿಂದ ಪದವಿ ಪರೀಕ್ಷೆಗಳು ಆರಂಭಗೊಂಡಿದ್ದು, ಹಾಜರಾತಿ ಕೊರತೆಯಾದ 70 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ.</p>.<p>ಪ್ರವೇಶ ಪತ್ರ ವಿತರಣೆ ಮಾಡದ ಕಾರಣ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.</p>.<p>ಆಡಳಿತ ಮಂಡಳಿ ಹಾಜರಾತಿ ಕೊರತೆಯ ನೆಪ ಹೇಳಿ ಪ್ರವೇಶ ಪತ್ರ ವಿತರಿಸಿಲ್ಲ ಎಂದು ವಿದ್ಯಾರ್ಥಿಗಳು ನೋವು ತೋಡಿಕೊಂಡರು.</p>.<p>ವಿವಿಧ ಪದವಿಯ 70 ವಿದ್ಯಾರ್ಥಿಗಳು 2, 4 ಹಾಗೂ 6ನೇ ಸೆಮಿಸ್ಟರ್ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ. ಕಾಲೇಜು ಪ್ರಾಂಶುಪಾಲ ತಿಮ್ಮಯ್ಯ ವಿರುದ್ಧ ಪರೀಕ್ಷಾ ವಂಚಿತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಆರೋಗ್ಯ ಸಮಸ್ಯೆಯಿಂದ ನನಗೆ ಹಾಜರಾತಿ ಕೊರತೆಯಾಗಿದೆ. ಪ್ರಾಂಶುಪಾಲರು ಅದನ್ನು ಒಪ್ಪಿಕೊಳ್ಳುತ್ತಿಲ್ಲ. ನಮ್ಮ ವಿದ್ಯಾಭ್ಯಾಸಕ್ಕೆ ಪ್ರಾಂಶುಪಾಲರೇ ಅಡ್ಡಿಯಾಗುತ್ತಿದ್ದಾರೆ. ಮಾನವೀಯ ನೆಲೆಯಲ್ಲಿ ಅವಕಾಶ ನೀಡಬೇಕಿತ್ತು’ ಎಂದು ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಯೊಬ್ಬ ನೋವು ತೋಡಿಕೊಂಡ.</p>.<p>‘ಮಂಗಳೂರು ವಿಶ್ವವಿದ್ಯಾಲಯದ ನಿಯಮದಂತೆ ಹಾಜರಾತಿ ಕಡ್ಡಾಯಗೊಳಿಸಿದ್ದೇವೆ. ಹಾಜರಾತಿ ಕೊರತೆಯಾಗಿದ್ದ 70 ವಿದ್ಯಾರ್ಥಿಗಳಿಗೆ ಮೂರು ತಿಂಗಳ ಮೊದಲೇ ಸೂಚನೆ ನೀಡಲಾಗಿತ್ತು. ಆದರೂ, ಹಾಜರಾತಿ ಕೊರತೆಯಾದ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳದೇ ಈಗ ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ಕಾಲೇಜು ಪ್ರಾಂಶುಪಾಲ ಟಿ.ಡಿ. ತಿಮ್ಮಯ್ಯ ತಿಳಿಸಿದರು.</p>.<p>ಎನ್ಸಿಸಿ, ಎನ್ಎಸ್ಎಸ್ ಹಾಗೂ ಪ್ರಾಕೃತಿಕ ವಿಕೋಪಕ್ಕೆ ಒಳಗಾದ ಸಂತ್ರಸ್ತ ವಿದ್ಯಾರ್ಥಿಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದೂ ಪ್ರತಿಕ್ರಿಯಿಸಿದರು. ಪಿಎಸ್ಐ ಷಣ್ಮುಗಂ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>