ಬಳಗದ ಅಧ್ಯಕ್ಷ ಕೇಶವ ಕಾಮತ್ ಅವರು, ‘ನಡೆದಾಡುವ ದೇವರು’, ‘ಕಾಯಕಯೋಗಿ’ ಸ್ವಾಮೀಜಿ ಲಕ್ಷಾಂತರ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿದವರು. ಕೊನೆ ಕ್ಷಣದಲ್ಲಿಯೂ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ದಾಸೋಹ ಆದ ನಂತರವೇ ಮಕ್ಕಳಿಗೆ ಸಾವಿನ ಸುದ್ದಿ ತಿಳಿಸಿ ಎಂದು ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ’ ಎಂದು ತಿಳಿಸಿದರು.