ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

27ರಂದು ‘ಸಂವಿಧಾನದ ಆಶಯಗಳು’ ಕಾರ್ಯಾಗಾರ

Last Updated 22 ಜನವರಿ 2019, 12:12 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಮಾನವ ಬಂಧುತ್ವ ವೇದಿಕೆ ನಗರದ ಅಂಬೇಡ್ಕರ್ ಭವನದಲ್ಲಿ ಜ.27ರ ಬೆಳಿಗ್ಗೆ 10.30ಕ್ಕೆ ‘ಸಂವಿಧಾನದ ಆಶಯಗಳು’ ವಿಷಯ ಕುರಿತು ಕಾರ್ಯಾಗಾರ ಏರ್ಪಡಿಸಿದೆ ಎಂದು ವೇದಿಕೆ ಜಿಲ್ಲಾ ಸಂಚಾಲಕ ಸುರೇಶ್ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೇದಿಕೆ ರಾಜ್ಯದಾದ್ಯಂತ ವೈಚಾರಿಕ ಜಾಗೃತಿ ಮತ್ತು ಸ್ವಾಭಿಮಾನ ಮೂಡಿಸುವಲ್ಲಿ ಕಾರ್ಯಾಗಾರ ನಡೆಸುತ್ತಾ ಬಂದಿದೆ. ಬುದ್ಧ, ಬಸವ, ನಾರಾಯಣ ಗುರು, ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಸಂವಿಧಾನದ ಆಶಯಗಳ ಬಗ್ಗೆ ವೇದಿಕೆ ಬದ್ಧತೆ ಹೊಂದಿದೆ ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆ ಪ್ರಧಾನ ಸಂಚಾಲಕ ಕೆ.ಎಂ. ಕುಂಞ ಅಬ್ದುಲ್ಲಾ ವಹಿಸಲಿದ್ದಾರೆ. ಚಿಂತಕ ಎಚ್.ಎನ್. ನಾಗಮೋಹನದಾಸ್ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಹೈಕೋರ್ಟ್ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ, ವೇದಿಕೆ ಗೌರವ ಸಂಚಾಲಕ ಕೆ.ಆರ್. ವಿದ್ಯಾಧರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರಪೇಟೆ ತಾಲ್ಲೂಕು ಸಂಚಾಲಕ ಜನಾರ್ಧನ, ಜಿಲ್ಲಾ ಸಂಚಾಲಕರಾದ ರಜಾಕ್, ಕೆ.ಎನ್. ಪೂವಯ್ಯ, ನಿರ್ದೇಶಕರಾದ ಅಲ್ಲಾರಂಡ ವಿಠಲ ನಂಜಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT