<p><strong>ಮಡಿಕೇರಿ</strong>: ‘ಮ್ಯಾನ್ಸ್ ಕಾಂಪೌಂಡ್ ಕ್ಲಬ್’ ಸ್ಥಾಪನೆಯಾಗಿ 50 ವರ್ಷ ಪೂರ್ಣಗೊಳಿಸಿದ್ದು ಅದರ ಅಂಗವಾಗಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಫುಟ್ಬಾಲ್ ಟೂರ್ನಿಗೆ ಶನಿವಾರ ಚಾಲನೆ ದೊರೆಯಿತು.</p>.<p>ಜೂನಿಯರ್ ಕಾಲೇಜು ನಿವೃತ ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮಣ್ ಸಿಂಗ್ ಟೂರ್ನಿಗೆ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಕ್ರೀಡೆಗೆ ಇನ್ನಷ್ಟು ಉತ್ತೇಜನ ನೀಡಿದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಕ್ರೀಡಾಪಟು ಪ್ರಶಸ್ತಿ ಗಳಿಸಲಿದ್ದಾರೆ’ ಎಂದು ಹೇಳಿದರು.</p>.<p>ಕ್ರೀಡೆಯಲ್ಲಿ ಸೋಲು–ಗೆಲುವುಗಳನ್ನು ಸಮಾನವಾಗಿ ತೆಗೆದುಕೊಳ್ಳಬೇಕು. ಯುವಕರು ತಮ್ಮನ್ನು ತಾವು ಕ್ರೀಡಾ ಸ್ಪರ್ಧೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜೂನಿಯರ್ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಶ್ರೀನಿವಾಸ್ ಮಾತನಾಡಿ, 1968ರಲ್ಲಿ ಆರಂಭವಾದ ಕ್ಲಬ್ 2018ಕ್ಕೆ 50 ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ನೆನಪಿಗಾಗಿ ಜಿಲ್ಲಾಮಟ್ಟದ ಟೂರ್ನಿ ಆಯೋಜಿಸಲು ಸಾರ್ವಜನಿಕರ ಸಹಕಾರ ದೊರೆತಿದೆ ಎಂದು ಸಂತೋಷ ವ್ಯಕ್ತಪಡಿಸಿದರು.</p>.<p>ಟೂರ್ನಿಯಲ್ಲಿ ಅನಗತ್ಯ ಗೊಂದಲ ಸೃಷ್ಟಿಗೆ ಅವಕಾಶ ಕಲ್ಪಿಸದೇ ಪಾರದರ್ಶಕತೆ ಇರಬೇಕು; ಎಲ್ಲರಿಗೂ ಅವಕಾಶ ಕಲ್ಪಿಸಬೇಕು ಎಂದು ನುಡಿದರು.</p>.<p>ಪಂದ್ಯಾವಳಿಯಲ್ಲಿ ಸಾಕಷ್ಟು ತಂಡಗಳು ಆಗಮಿಸಿದ್ದರೂ ಮೊದಲು ನೋಂದಣಿ ಮಾಡಿಕೊಂಡ 30 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.</p>.<p>ಹಿರಿಯ ಆಟಗಾರ ಎನ್.ಕೆ. ರವೀಂದ್ರ ಮಾತನಾಡಿ, ನಮ್ಮ ಕ್ಲಬ್ನಿಂದ ತರಬೇತಿ ಪಡೆದ ಸಾಕಷ್ಟು ಮಂದಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಫುಟ್ಬಾಲ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಒಟ್ಟು 30 ತಂಡಗಳು ಟೂರ್ನಿಯಲ್ಲಿ ಪಾಲ್ಗೊಂಡಿವೆ. ಭಾನುವಾರ ಫೈನಲ್ ಪಂದ್ಯ ನಡೆಯಲಿದೆ. </p>.<p>ಕ್ಲಬ್ ಕಾರ್ಯದರ್ಶಿ ಪಿ. ಉಮೇಶ್ ಕುಮಾರ್, ಖಜಾಂಚಿ ಪೀಟರ್, ಹಿರಿಯ ಆಟಗಾರ ಎನ್.ಕೆ. ರವೀಂದ್ರ, ಸದಸ್ಯ ಬಿ.ಜೆ. ಮನೋಜ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ‘ಮ್ಯಾನ್ಸ್ ಕಾಂಪೌಂಡ್ ಕ್ಲಬ್’ ಸ್ಥಾಪನೆಯಾಗಿ 50 ವರ್ಷ ಪೂರ್ಣಗೊಳಿಸಿದ್ದು ಅದರ ಅಂಗವಾಗಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಫುಟ್ಬಾಲ್ ಟೂರ್ನಿಗೆ ಶನಿವಾರ ಚಾಲನೆ ದೊರೆಯಿತು.</p>.<p>ಜೂನಿಯರ್ ಕಾಲೇಜು ನಿವೃತ ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮಣ್ ಸಿಂಗ್ ಟೂರ್ನಿಗೆ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಕ್ರೀಡೆಗೆ ಇನ್ನಷ್ಟು ಉತ್ತೇಜನ ನೀಡಿದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಕ್ರೀಡಾಪಟು ಪ್ರಶಸ್ತಿ ಗಳಿಸಲಿದ್ದಾರೆ’ ಎಂದು ಹೇಳಿದರು.</p>.<p>ಕ್ರೀಡೆಯಲ್ಲಿ ಸೋಲು–ಗೆಲುವುಗಳನ್ನು ಸಮಾನವಾಗಿ ತೆಗೆದುಕೊಳ್ಳಬೇಕು. ಯುವಕರು ತಮ್ಮನ್ನು ತಾವು ಕ್ರೀಡಾ ಸ್ಪರ್ಧೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜೂನಿಯರ್ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಶ್ರೀನಿವಾಸ್ ಮಾತನಾಡಿ, 1968ರಲ್ಲಿ ಆರಂಭವಾದ ಕ್ಲಬ್ 2018ಕ್ಕೆ 50 ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ನೆನಪಿಗಾಗಿ ಜಿಲ್ಲಾಮಟ್ಟದ ಟೂರ್ನಿ ಆಯೋಜಿಸಲು ಸಾರ್ವಜನಿಕರ ಸಹಕಾರ ದೊರೆತಿದೆ ಎಂದು ಸಂತೋಷ ವ್ಯಕ್ತಪಡಿಸಿದರು.</p>.<p>ಟೂರ್ನಿಯಲ್ಲಿ ಅನಗತ್ಯ ಗೊಂದಲ ಸೃಷ್ಟಿಗೆ ಅವಕಾಶ ಕಲ್ಪಿಸದೇ ಪಾರದರ್ಶಕತೆ ಇರಬೇಕು; ಎಲ್ಲರಿಗೂ ಅವಕಾಶ ಕಲ್ಪಿಸಬೇಕು ಎಂದು ನುಡಿದರು.</p>.<p>ಪಂದ್ಯಾವಳಿಯಲ್ಲಿ ಸಾಕಷ್ಟು ತಂಡಗಳು ಆಗಮಿಸಿದ್ದರೂ ಮೊದಲು ನೋಂದಣಿ ಮಾಡಿಕೊಂಡ 30 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.</p>.<p>ಹಿರಿಯ ಆಟಗಾರ ಎನ್.ಕೆ. ರವೀಂದ್ರ ಮಾತನಾಡಿ, ನಮ್ಮ ಕ್ಲಬ್ನಿಂದ ತರಬೇತಿ ಪಡೆದ ಸಾಕಷ್ಟು ಮಂದಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಫುಟ್ಬಾಲ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಒಟ್ಟು 30 ತಂಡಗಳು ಟೂರ್ನಿಯಲ್ಲಿ ಪಾಲ್ಗೊಂಡಿವೆ. ಭಾನುವಾರ ಫೈನಲ್ ಪಂದ್ಯ ನಡೆಯಲಿದೆ. </p>.<p>ಕ್ಲಬ್ ಕಾರ್ಯದರ್ಶಿ ಪಿ. ಉಮೇಶ್ ಕುಮಾರ್, ಖಜಾಂಚಿ ಪೀಟರ್, ಹಿರಿಯ ಆಟಗಾರ ಎನ್.ಕೆ. ರವೀಂದ್ರ, ಸದಸ್ಯ ಬಿ.ಜೆ. ಮನೋಜ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>