ಮಡಿಕೇರಿ: ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕೊಡಂದೇರ ಪಿ. ಗಣಪತಿ ನೂತನ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ವಹಿಸಿಕೊಂಡರು.
ಮಾಜಿ ಅಧ್ಯಕ್ಷ ಡಿ.ಕೆ. ಚಿಂಗಪ್ಪ ಅವರು ಅಧಿಕಾರ ಹಸ್ತಾಂತರಿಸಿದರು. ಹಿಂದಿನ ನಿರ್ದೇಶಕರಾದ ಕುಮಾರಪ್ಪ ಮತ್ತು ಸೋಮಯ್ಯ ಅವರು ಬೈಲಾ ಹಾಗೂ ಆಡಳಿತಾತ್ಮಕ ಕಡತ ಹಸ್ತಾಂತರಿಸಿದರು.
ಗಣಪತಿ ಮಾತನಾಡಿ, ಮುಂದಿನ 5 ವರ್ಷಗಳ ಕಾಲ ಬ್ಯಾಂಕ್ ಅನ್ನು ಪ್ರಗತಿಯತ್ತ ಕೊಂಡೊಯ್ಯಲು ಎಲ್ಲರ ಸಹಕಾರ ಅಗತ್ಯ ಎಂದು ಕೋರಿದರು.
ಬ್ಯಾಂಕಿನ ಕೇಂದ್ರ ಕಚೇರಿ ಆವರಣದಲ್ಲಿ 5 ಅಂತಸ್ತಿನ ಶತಮಾನೋತ್ಸವ ಕಟ್ಟಡವನ್ನು ನಿರ್ಮಿಸಿ ಜಿಲ್ಲಾ ಸಹಕಾರಿ ಬ್ಯಾಂಕನ್ನು ಮುಂಚೂಣಿಗೆ ಕೊಂಡೊಯ್ಯಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಬ್ಯಾಂಕ್ನಿಂದ ರೈತರಿಗೆ ಸುಲಭವಾಗಿ ಸಾಲ ನೀಡಲಾಗುವುದು. ಜತೆಗೆ, ಗ್ರಾಹಕರ ಸಂಖ್ಯೆ ಹೆಚ್ಚಳಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬ್ಯಾಂಕ್ನ ಆಡಳಿತ ಮಂಡಳಿ ನಿರ್ದೇಶಕರಾದ ಕನ್ನಂಡ ಸಂಪತ್, ಕಿಮ್ಮುಡೀರ ಜಗದೀಶ್, ಬಿ.ಕೆ. ಚಿಣ್ಣಪ್ಪ, ಉಷಾ ತೇಜಸ್ವಿ, ಕೆ.ಎ ಸುಬ್ರಮಣಿ, ಎಚ್.ಎಂ ರಮೇಶ್, ಪಟ್ರಪಂಡ ರಘು ಹಾಜರಿದ್ದರು.