<p><strong>ಪೊನ್ನಂಪೇಟೆ: </strong>ಸಂಸ್ಥೆಯು ಕಾರ್ಮಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಪ್ರತಿ ವರ್ಷ ಕಾರ್ಮಿಕರ ದಿನಾಚರಣೆ ಅಂಗವಾಗಿ ತಪ್ಪದೆ ಕ್ರೀಡಾಕೂಟ ಆಯೋಜಿಸಿಕೊಂಡು ಬರುತ್ತಿದೆ ಎಂದು ಟಾಟಾ ಕಾಫಿ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಕೆ.ಜಿ ರಾಜೀವ್ ಅಭಿಪ್ರಾಯಪಟ್ಟರು.</p>.<p>ಪಾಲಿಬೆಟ್ಟದ ಟಾಟಾ ಕಾಫಿ ಮೈದಾನದಲ್ಲಿ ಕಾರ್ಮಿಕರ ದಿನದ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.</p>.<p>ತೋಟಗಳಲ್ಲಿ ವನ್ಯಮೃಗಗಳ ಹಾವಳಿ ಹೆಚ್ಚಾಗಿರುವ ಕಾರಣ ಕಾರ್ಮಿಕರು ಎಚ್ಚರದಿಂದ ಕೆಲಸ ಮಾಡಬೇಕಿದೆ. ವರ್ಷವಿಡೀ ದುಡಿಯುವ ಕಾರ್ಮಿಕ ವರ್ಗಕ್ಕೆ ಮನರಂಜನೆ ನೀಡುವ ಉದ್ದೇಶದಿಂದ ಕ್ರೀಡೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.</p>.<p>ಕ್ರೀಡಾಜ್ಯೋತಿಯನ್ನು ಬೆಳಗುವ ಮೂಲಕ ಹಿರಿಯ ಪ್ರಧಾನ ವ್ಯವಸ್ಥಾಪಕ ಎಂ.ಬಿ ಗಣಪತಿ ಕಾರ್ಮಿಕರ ದಿನಾಚರಣೆಗೆ ಚಾಲನೆ ನೀಡಿದರು. ವಿವಿಧ ಭಾಗಗಳಿಂದ ಬಂದಿದ್ದ ಕಾರ್ಮಿಕರು ಪಥಸಂಚಲನ ನಡೆಸಿದರು.</p>.<p>ಕ್ರೀಡಾಕೂಟದಲ್ಲಿ ಗೋಣಿಚೀಲ ಓಟ, ಮಡಕೆ ಹೊತ್ತು ಓಟ, ಮೂರು ಕಾಲಿನ ಓಟ, ಹಗ್ಗಜಗ್ಗಾಟ ಗಮನಸೆಳೆದವು.</p>.<p>ಕ್ರೀಡಾ ಸಂಚಾಲಕ ಕಿರಣ್ ಮಾಧವನ್ ಹಾಗೂ ಕ್ರೀಡಾ ಸಲಹೆಗಾರ ಸಿ.ಯು ಅಶೋಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೊನ್ನಂಪೇಟೆ: </strong>ಸಂಸ್ಥೆಯು ಕಾರ್ಮಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಪ್ರತಿ ವರ್ಷ ಕಾರ್ಮಿಕರ ದಿನಾಚರಣೆ ಅಂಗವಾಗಿ ತಪ್ಪದೆ ಕ್ರೀಡಾಕೂಟ ಆಯೋಜಿಸಿಕೊಂಡು ಬರುತ್ತಿದೆ ಎಂದು ಟಾಟಾ ಕಾಫಿ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಕೆ.ಜಿ ರಾಜೀವ್ ಅಭಿಪ್ರಾಯಪಟ್ಟರು.</p>.<p>ಪಾಲಿಬೆಟ್ಟದ ಟಾಟಾ ಕಾಫಿ ಮೈದಾನದಲ್ಲಿ ಕಾರ್ಮಿಕರ ದಿನದ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.</p>.<p>ತೋಟಗಳಲ್ಲಿ ವನ್ಯಮೃಗಗಳ ಹಾವಳಿ ಹೆಚ್ಚಾಗಿರುವ ಕಾರಣ ಕಾರ್ಮಿಕರು ಎಚ್ಚರದಿಂದ ಕೆಲಸ ಮಾಡಬೇಕಿದೆ. ವರ್ಷವಿಡೀ ದುಡಿಯುವ ಕಾರ್ಮಿಕ ವರ್ಗಕ್ಕೆ ಮನರಂಜನೆ ನೀಡುವ ಉದ್ದೇಶದಿಂದ ಕ್ರೀಡೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.</p>.<p>ಕ್ರೀಡಾಜ್ಯೋತಿಯನ್ನು ಬೆಳಗುವ ಮೂಲಕ ಹಿರಿಯ ಪ್ರಧಾನ ವ್ಯವಸ್ಥಾಪಕ ಎಂ.ಬಿ ಗಣಪತಿ ಕಾರ್ಮಿಕರ ದಿನಾಚರಣೆಗೆ ಚಾಲನೆ ನೀಡಿದರು. ವಿವಿಧ ಭಾಗಗಳಿಂದ ಬಂದಿದ್ದ ಕಾರ್ಮಿಕರು ಪಥಸಂಚಲನ ನಡೆಸಿದರು.</p>.<p>ಕ್ರೀಡಾಕೂಟದಲ್ಲಿ ಗೋಣಿಚೀಲ ಓಟ, ಮಡಕೆ ಹೊತ್ತು ಓಟ, ಮೂರು ಕಾಲಿನ ಓಟ, ಹಗ್ಗಜಗ್ಗಾಟ ಗಮನಸೆಳೆದವು.</p>.<p>ಕ್ರೀಡಾ ಸಂಚಾಲಕ ಕಿರಣ್ ಮಾಧವನ್ ಹಾಗೂ ಕ್ರೀಡಾ ಸಲಹೆಗಾರ ಸಿ.ಯು ಅಶೋಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>