ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ, ‘ಭಾರೀ ಮಳೆಯಿಂದ ರಸ್ತೆಗಳು ಹಾನಿಗೀಡಾಗಿದ್ದವು. ಆಗ ಸ್ಥಳೀಯ ಗುತ್ತಿಗೆದಾರರೇ ಪ್ರಾಣ ಭಯ ತೊರೆದು, ಸ್ವಂತ ಹಣ ವಿನಿಯೋಗಿಸಿ ತಾತ್ಕಾಲಿಕ ರಸ್ತೆ ನಿರ್ಮಿಸಿದ್ದರು. ಆದರೆ, ಈಗ ಹೊರ ಜಿಲ್ಲಾ ಸಂಸ್ಥೆಗೆ ಗುತ್ತಿಗೆ ನೀಡುವುದಕ್ಕೆ ನಮ್ಮ ವಿರೋಧವಿದೆ’ ಎಂದು ಹೇಳಿದರು.