<p><strong>ಮಡಿಕೇರಿ:</strong> ಇಲ್ಲಿನ ಜೂನಿಯರ್ ಕಾಲೇಜು ಕಟ್ಟಡದಲ್ಲಿ ಆರು ತಿಂಗಳಿಂದ ದಾಸ್ತಾನು ಇಡಲಾಗಿದ್ದ ಸಂತ್ರಸ್ತರ ಪರಿಹಾರ ಸಾಮಗ್ರಿಗಳನ್ನು ಜಿಲ್ಲೆಯ ವಿವಿಧ ಮಕ್ಕಳ ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ಪೂರೈಕೆ ಮಾಡಲು ಕೊಡಗು ಜಿಲ್ಲಾಡಳಿತ ತೀರ್ಮಾನಿಸಿದೆ.</p>.<p>‘ದಾಸ್ತಾನು ಇಟ್ಟಿದ್ದ ಪರಿಹಾರ ಸಾಮಗ್ರಿಗಳು ಹಾಳಾಗುತ್ತಿವೆ’ ಎಂಬ ಆರೋಪಗಳು ಕೇಳಿ ಬಂದಿದ್ದವು. ಜಿಲ್ಲಾ ಪಂಚಾಯಿತಿ ಸಭೆಯಲ್ಲೂ ಚರ್ಚೆ ನಡೆದು ಸಂತ್ರಸ್ತರು ಹಾಗೂ ಅಗತ್ಯವಿರುವ ಸಂಸ್ಥೆಗಳಿಗೆ ವಿತರಣೆ ಮಾಡುವಂತೆ ತೀರ್ಮಾನಿಸಲಾಗಿತ್ತು.</p>.<p>ಸಂತ್ರಸ್ತರಿಗೆ ಮೊದಲ ಆದ್ಯತೆ ನೀಡಲಾಗುವುದು. ಉಳಿದಂತೆ ಜಿಲ್ಲಾಧಿಕಾರಿ ಅವರ ಸೂಚನೆಯ ಮೇರೆಗೆ ಪೂರೈಕೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಸುಂಟಿಕೊಪ್ಪಸ್ವಾಸ್ಥ್ಯಕೇಂದ್ರ, ಮಡಿಕೇರಿಯ ಸ್ತ್ರೀಶಕ್ತಿ ವೃದ್ಧಾಶ್ರಮ, ವಿಕಾಸ ಜನಸೇವಾ ಟ್ರಸ್ಟ್, ಹಿರಿಯ ನಾಗರಿಕರ ವೇದಿಕೆ, ಅಮೃತವಾಣಿ ಸಂಸ್ಥೆಯ ಪ್ರತಿನಿಧಿಗಳು ಆಹಾರ ಸಾಮಗ್ರಿ ಪಡೆಯಲು ಸೋಮವಾರ ಬಂದಿದ್ದರು.</p>.<p>ಸ್ವಾಸ್ಥ್ಯ ಸಂಸ್ಥೆಯ ಪ್ರತಿನಿಧಿ ಸತೀಶ್ ಮಾತನಾಡಿ, ಅಧಿಕಾರಿಗಳ ಸೂಚನೆಯಂತೆ ಬಂದಿದ್ದೇವೆ. 25 ಕೆ.ಜಿ ಅಕ್ಕಿ ನೀಡುತ್ತೇವೆಂದು ಅಧಿಕಾರಿಗಳು ತಿಳಿಸಿದ್ದು ಇದರಿಂದ ಮಕ್ಕಳ ಊಟಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ವಿಕಾಸ ಜನಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಪ್ರತಿಕ್ರಿಯಿಸಿ, ‘ಜಿಲ್ಲಾಡಳಿತದ ಅನುಮತಿ ಪಡೆದುಕೊಂಡೇ ಆಹಾರ ಸಾಮಗ್ರಿಗಳನ್ನು ಪಡೆಯುತ್ತಿದ್ದೇವೆ. ಆದರೆ, ನಿರೀಕ್ಷಿಸಿದಷ್ಟು ಸಿಗುತ್ತಿಲ್ಲ. ಆದರೂ, ಗೋದಾಮಿನಲ್ಲಿ ದಾಸ್ತಾನಿಟ್ಟು ಹಾಳು ಮಾಡದೇ ಅಗತ್ಯವುಳ್ಳ ಸಂಸ್ಥೆಗಳಿಗೆ ವಿತರಣೆ ಮಾಡಬೇಕು’ ಎಂದು ಕೋರಿದರು.</p>.<p>‘ಮಡಿಕೇರಿ ಹಾಗೂ ಕುಶಾಲನಗರದಲ್ಲಿ ಗೋದಾಮಿನಲ್ಲಿ ಹೆಚ್ಚಿನ ಸಾಮಗ್ರಿಗಳು ಇವೆ. ಗೋದಾಮು ಪರಿಶೀಲಿಸಿದ್ದೇನೆ. ಆಹಾರ ಪದಾರ್ಥ ಪೋಲು ಹಾಗೂ ಕೆಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇಲ್ಲಿನ ಜೂನಿಯರ್ ಕಾಲೇಜು ಕಟ್ಟಡದಲ್ಲಿ ಆರು ತಿಂಗಳಿಂದ ದಾಸ್ತಾನು ಇಡಲಾಗಿದ್ದ ಸಂತ್ರಸ್ತರ ಪರಿಹಾರ ಸಾಮಗ್ರಿಗಳನ್ನು ಜಿಲ್ಲೆಯ ವಿವಿಧ ಮಕ್ಕಳ ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ಪೂರೈಕೆ ಮಾಡಲು ಕೊಡಗು ಜಿಲ್ಲಾಡಳಿತ ತೀರ್ಮಾನಿಸಿದೆ.</p>.<p>‘ದಾಸ್ತಾನು ಇಟ್ಟಿದ್ದ ಪರಿಹಾರ ಸಾಮಗ್ರಿಗಳು ಹಾಳಾಗುತ್ತಿವೆ’ ಎಂಬ ಆರೋಪಗಳು ಕೇಳಿ ಬಂದಿದ್ದವು. ಜಿಲ್ಲಾ ಪಂಚಾಯಿತಿ ಸಭೆಯಲ್ಲೂ ಚರ್ಚೆ ನಡೆದು ಸಂತ್ರಸ್ತರು ಹಾಗೂ ಅಗತ್ಯವಿರುವ ಸಂಸ್ಥೆಗಳಿಗೆ ವಿತರಣೆ ಮಾಡುವಂತೆ ತೀರ್ಮಾನಿಸಲಾಗಿತ್ತು.</p>.<p>ಸಂತ್ರಸ್ತರಿಗೆ ಮೊದಲ ಆದ್ಯತೆ ನೀಡಲಾಗುವುದು. ಉಳಿದಂತೆ ಜಿಲ್ಲಾಧಿಕಾರಿ ಅವರ ಸೂಚನೆಯ ಮೇರೆಗೆ ಪೂರೈಕೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಸುಂಟಿಕೊಪ್ಪಸ್ವಾಸ್ಥ್ಯಕೇಂದ್ರ, ಮಡಿಕೇರಿಯ ಸ್ತ್ರೀಶಕ್ತಿ ವೃದ್ಧಾಶ್ರಮ, ವಿಕಾಸ ಜನಸೇವಾ ಟ್ರಸ್ಟ್, ಹಿರಿಯ ನಾಗರಿಕರ ವೇದಿಕೆ, ಅಮೃತವಾಣಿ ಸಂಸ್ಥೆಯ ಪ್ರತಿನಿಧಿಗಳು ಆಹಾರ ಸಾಮಗ್ರಿ ಪಡೆಯಲು ಸೋಮವಾರ ಬಂದಿದ್ದರು.</p>.<p>ಸ್ವಾಸ್ಥ್ಯ ಸಂಸ್ಥೆಯ ಪ್ರತಿನಿಧಿ ಸತೀಶ್ ಮಾತನಾಡಿ, ಅಧಿಕಾರಿಗಳ ಸೂಚನೆಯಂತೆ ಬಂದಿದ್ದೇವೆ. 25 ಕೆ.ಜಿ ಅಕ್ಕಿ ನೀಡುತ್ತೇವೆಂದು ಅಧಿಕಾರಿಗಳು ತಿಳಿಸಿದ್ದು ಇದರಿಂದ ಮಕ್ಕಳ ಊಟಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ವಿಕಾಸ ಜನಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಪ್ರತಿಕ್ರಿಯಿಸಿ, ‘ಜಿಲ್ಲಾಡಳಿತದ ಅನುಮತಿ ಪಡೆದುಕೊಂಡೇ ಆಹಾರ ಸಾಮಗ್ರಿಗಳನ್ನು ಪಡೆಯುತ್ತಿದ್ದೇವೆ. ಆದರೆ, ನಿರೀಕ್ಷಿಸಿದಷ್ಟು ಸಿಗುತ್ತಿಲ್ಲ. ಆದರೂ, ಗೋದಾಮಿನಲ್ಲಿ ದಾಸ್ತಾನಿಟ್ಟು ಹಾಳು ಮಾಡದೇ ಅಗತ್ಯವುಳ್ಳ ಸಂಸ್ಥೆಗಳಿಗೆ ವಿತರಣೆ ಮಾಡಬೇಕು’ ಎಂದು ಕೋರಿದರು.</p>.<p>‘ಮಡಿಕೇರಿ ಹಾಗೂ ಕುಶಾಲನಗರದಲ್ಲಿ ಗೋದಾಮಿನಲ್ಲಿ ಹೆಚ್ಚಿನ ಸಾಮಗ್ರಿಗಳು ಇವೆ. ಗೋದಾಮು ಪರಿಶೀಲಿಸಿದ್ದೇನೆ. ಆಹಾರ ಪದಾರ್ಥ ಪೋಲು ಹಾಗೂ ಕೆಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>