<p><strong>ಮಡಿಕೇರಿ:</strong> ಜೀವನಮಟ್ಟ ಸುಧಾರಣೆ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಜನಸಂಖ್ಯಾ ಸ್ಫೋಟ ತಡೆಯುವುದು ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಪ್ರತಿಪಾದಿಸಿದರು.</p>.<p>ಜಿಲ್ಲಾಡಳಿತ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಗರದ ಕಾವೇರಿ ಕಲಾ ಕೇತ್ರದಲ್ಲಿ ಗುರುವಾರ ನಡೆದ ‘ವಿಶ್ವ ಜನಸಂಖ್ಯಾ ದಿನಚಾರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರತಿಯೊಬ್ಬರಿಗೂ ಶಿಕ್ಷಣ ಆರೋಗ್ಯ, ಆಹಾರ, ವಸತಿ, ಉದ್ಯೋಗ ಮತ್ತಿತರ ಮೂಲ ಸೌಲಭ್ಯ ದೊರೆಯುವಂತಾಗಲೂ ಜನಸಂಖ್ಯೆ ನಿಯಂತ್ರಣ ಅಗತ್ಯ ಎಂದು ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಪಕ ಡಾ.ಕೆ.ಸಿ. ದಯಾನಂದ ಮಾತನಾಡಿ, ಮಾನವ ಸಂಪನ್ಮೂಲ ಒಂದು ರೀತಿ ವರವಾಗಿದೆ. ಆದರೆ, ಭಾರತ ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಜನಸಂಖ್ಯೆ ವರವಾಗಿಲ್ಲ ಬದವಾಗಿ ಮಾರಕವಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಆರ್ಥಿಕವಾಗಿ ಹಿಂದುಳಿದ ರಾಷ್ಟ್ರಗಳಲ್ಲಿ ಜನಸಂಖ್ಯಾ ಸ್ಫೋಟ ಕಾಣಬಹುದು. ಆದರಿಂದ, ಜನಸಂಖ್ಯೆ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನ ಗೊಳಿಸುವುದು, ಲಿಂಗ ತಾರತಮ್ಯ ಹೋಗಲಾಡಿಸುವುದು, ಮಾನವ ಹಕ್ಕುಗಳ ರಕ್ಷಣೆ ಮಾಡುವುದು ಮತ್ತಿತರ ಕಾರ್ಯಕ್ರಮ ಜಾರಿಗೊಳಿಸುವುದು ಅತ್ಯಗತ್ಯ ಎಂದು ಹೇಳಿದರು.</p>.<p>ಜತೆಗೆ ಜನಸಂಖ್ಯೆ ನಿಯಂತ್ರಿಸಲು ಶಸ್ತ್ರ ಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡುವುದು. ಕುಟುಂಬಗಳಿಗೆ ಪ್ರೋತ್ಸಾಹದಾಯಕ ಕಾರ್ಯಕ್ರಮ ಕಲ್ಪಿಸುವುದು, ಕುಟುಂಬಗಳಲ್ಲಿನ ಮಕ್ಕಳಲ್ಲಿ ವಿಶ್ವಾಸ ಬೆಳೆಸುವುದು, ಮತ್ತಿತ್ತರ ಕಾರ್ಯಕ್ರಮ ಜಾರಿಗೊಳಿಸಬೇಕಿದೆ ಎಂದು ಸಲಹೆ ಮಾಡಿದರು.</p>.<p>ಬಡತನ, ಶಿಕ್ಷಣ, ಸಾಮಾಜಿಕ ನಂಬಿಕೆಗಳು, ಮಕ್ಕಳ ನಡುವೆ ಅಂತರ ಇಲ್ಲದಿರುವುದು ಜನಸಂಖ್ಯೆ ಸ್ಫೋಟಕ್ಕೆ ಕಾರಣವಾಗಿದೆ ಎಂದು ಹೇಳಿದರು.</p>.<p>ಜನಸಂಖ್ಯೆ ಹೆಚ್ಚಳವಾದಷ್ಟು ಸಮಾಜಘಾತುಕ ಚಟುವಟಿಕೆಗಳು ಅಧಿಕವಾಗುತ್ತದೆ. ಆದ್ದರಿಂದ ಜನಸಂಖ್ಯೆ ಸ್ಥಿರೀಕರಣ ಬಗ್ಗೆ ಗಮನ ಅರಿಸುವುದು ಅತ್ಯಗತ್ಯ ಎಂದು ಹೇಳಿದರು.</p>.<p>ಜನಸಂಖ್ಯೆ ಹೊರೆಯನ್ನು ಸಂಪನ್ಮೂಲವಾಗಿ ಪರಿವರ್ತನೆ ಮಾಡಬೇಕು, ಜ್ಞಾನವನ್ನು ವೃದ್ಧಿಸುವುದು, ವೃತ್ತಿ ಕೌಶಲ ತರಬೇತಿ ಕಾರ್ಯಕ್ರಮ ಜಾರಿಗೊಳಿಸಬೇಕಿದೆ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಜನಸಂಖ್ಯೆ ನಿಯಂತ್ರಣ ಸಂಬಂಧಿಸಿದಂತೆ ಕುಟುಂಬ ಕಲ್ಯಾಣ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.</p>.<p>ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಸಿ. ಕಾರ್ಯಪ್ಪ ಅವರು ವಸ್ತು ಪ್ರದರ್ಶನ ಉದ್ಘಾಟಿಸಿದರು.</p>.<p>ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮಚಂದ್ರ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಎಂ. ಶಿವಕುಮಾರ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಎಸ್. ಗೋಪಿನಾಥ್, ಸ್ತ್ರೀರೋಗ ತಜ್ಞರಾದ ಡಾ.ರಾಜೇಶ್ವರಿ ಹಾಜರಿದ್ದರು.</p>.<p>ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಾ.ಎ.ಸಿ. ಶಿವಕುಮಾರ್ ಸ್ವಾಗತಿಸಿದರು. ಸುಮಿತ್ರಾ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ರಮೇಶ್ ಅವರು ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಜೀವನಮಟ್ಟ ಸುಧಾರಣೆ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಜನಸಂಖ್ಯಾ ಸ್ಫೋಟ ತಡೆಯುವುದು ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಪ್ರತಿಪಾದಿಸಿದರು.</p>.<p>ಜಿಲ್ಲಾಡಳಿತ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಗರದ ಕಾವೇರಿ ಕಲಾ ಕೇತ್ರದಲ್ಲಿ ಗುರುವಾರ ನಡೆದ ‘ವಿಶ್ವ ಜನಸಂಖ್ಯಾ ದಿನಚಾರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರತಿಯೊಬ್ಬರಿಗೂ ಶಿಕ್ಷಣ ಆರೋಗ್ಯ, ಆಹಾರ, ವಸತಿ, ಉದ್ಯೋಗ ಮತ್ತಿತರ ಮೂಲ ಸೌಲಭ್ಯ ದೊರೆಯುವಂತಾಗಲೂ ಜನಸಂಖ್ಯೆ ನಿಯಂತ್ರಣ ಅಗತ್ಯ ಎಂದು ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಪಕ ಡಾ.ಕೆ.ಸಿ. ದಯಾನಂದ ಮಾತನಾಡಿ, ಮಾನವ ಸಂಪನ್ಮೂಲ ಒಂದು ರೀತಿ ವರವಾಗಿದೆ. ಆದರೆ, ಭಾರತ ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಜನಸಂಖ್ಯೆ ವರವಾಗಿಲ್ಲ ಬದವಾಗಿ ಮಾರಕವಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಆರ್ಥಿಕವಾಗಿ ಹಿಂದುಳಿದ ರಾಷ್ಟ್ರಗಳಲ್ಲಿ ಜನಸಂಖ್ಯಾ ಸ್ಫೋಟ ಕಾಣಬಹುದು. ಆದರಿಂದ, ಜನಸಂಖ್ಯೆ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನ ಗೊಳಿಸುವುದು, ಲಿಂಗ ತಾರತಮ್ಯ ಹೋಗಲಾಡಿಸುವುದು, ಮಾನವ ಹಕ್ಕುಗಳ ರಕ್ಷಣೆ ಮಾಡುವುದು ಮತ್ತಿತರ ಕಾರ್ಯಕ್ರಮ ಜಾರಿಗೊಳಿಸುವುದು ಅತ್ಯಗತ್ಯ ಎಂದು ಹೇಳಿದರು.</p>.<p>ಜತೆಗೆ ಜನಸಂಖ್ಯೆ ನಿಯಂತ್ರಿಸಲು ಶಸ್ತ್ರ ಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡುವುದು. ಕುಟುಂಬಗಳಿಗೆ ಪ್ರೋತ್ಸಾಹದಾಯಕ ಕಾರ್ಯಕ್ರಮ ಕಲ್ಪಿಸುವುದು, ಕುಟುಂಬಗಳಲ್ಲಿನ ಮಕ್ಕಳಲ್ಲಿ ವಿಶ್ವಾಸ ಬೆಳೆಸುವುದು, ಮತ್ತಿತ್ತರ ಕಾರ್ಯಕ್ರಮ ಜಾರಿಗೊಳಿಸಬೇಕಿದೆ ಎಂದು ಸಲಹೆ ಮಾಡಿದರು.</p>.<p>ಬಡತನ, ಶಿಕ್ಷಣ, ಸಾಮಾಜಿಕ ನಂಬಿಕೆಗಳು, ಮಕ್ಕಳ ನಡುವೆ ಅಂತರ ಇಲ್ಲದಿರುವುದು ಜನಸಂಖ್ಯೆ ಸ್ಫೋಟಕ್ಕೆ ಕಾರಣವಾಗಿದೆ ಎಂದು ಹೇಳಿದರು.</p>.<p>ಜನಸಂಖ್ಯೆ ಹೆಚ್ಚಳವಾದಷ್ಟು ಸಮಾಜಘಾತುಕ ಚಟುವಟಿಕೆಗಳು ಅಧಿಕವಾಗುತ್ತದೆ. ಆದ್ದರಿಂದ ಜನಸಂಖ್ಯೆ ಸ್ಥಿರೀಕರಣ ಬಗ್ಗೆ ಗಮನ ಅರಿಸುವುದು ಅತ್ಯಗತ್ಯ ಎಂದು ಹೇಳಿದರು.</p>.<p>ಜನಸಂಖ್ಯೆ ಹೊರೆಯನ್ನು ಸಂಪನ್ಮೂಲವಾಗಿ ಪರಿವರ್ತನೆ ಮಾಡಬೇಕು, ಜ್ಞಾನವನ್ನು ವೃದ್ಧಿಸುವುದು, ವೃತ್ತಿ ಕೌಶಲ ತರಬೇತಿ ಕಾರ್ಯಕ್ರಮ ಜಾರಿಗೊಳಿಸಬೇಕಿದೆ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಜನಸಂಖ್ಯೆ ನಿಯಂತ್ರಣ ಸಂಬಂಧಿಸಿದಂತೆ ಕುಟುಂಬ ಕಲ್ಯಾಣ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.</p>.<p>ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಸಿ. ಕಾರ್ಯಪ್ಪ ಅವರು ವಸ್ತು ಪ್ರದರ್ಶನ ಉದ್ಘಾಟಿಸಿದರು.</p>.<p>ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮಚಂದ್ರ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಎಂ. ಶಿವಕುಮಾರ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಎಸ್. ಗೋಪಿನಾಥ್, ಸ್ತ್ರೀರೋಗ ತಜ್ಞರಾದ ಡಾ.ರಾಜೇಶ್ವರಿ ಹಾಜರಿದ್ದರು.</p>.<p>ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಾ.ಎ.ಸಿ. ಶಿವಕುಮಾರ್ ಸ್ವಾಗತಿಸಿದರು. ಸುಮಿತ್ರಾ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ರಮೇಶ್ ಅವರು ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>