ಗುಡ್ಡಗಳ ಮೇಲೆ ಮನೆ ಇರುವುದು, ಚದುರಿದಂತಿರುವ ಗ್ರಾಮಗಳು, ಒಂಟಿ ಮನೆ, ವಿದ್ಯುತ್ ಮಾರ್ಗ ಎಳೆಯಲು ಅರಣ್ಯ ಇಲಾಖೆ ಅಡ್ಡಿ... ಹೀಗೆ ವಿವಿಧ ಕಾರಣಗಳಿಂದಾಗಿ ಕೊಡಗಿನ ಹಲವು ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ. ಇದೀಗ ಕೇಂದ್ರ ಸರ್ಕಾರದ ‘ಸೌಭಾಗ್ಯ’ ಯೋಜನೆಯಡಿ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲು ಸಿದ್ಧತೆ ನಡೆದಿದೆ.