ಜಿಲ್ಲಾ ಪಂಚಾಯಿತಿ ಸದಸ್ಯೆ ಪಂಕಜಾ ಮಾತನಾಡಿ, ‘ಪ್ರತಾಪ ಸಿಂಹ ಸೋಲಿನ ಭೀತಿಯಿಂದ ಸುಳ್ಳು ಮಾಹಿತಿ ನೀಡುತ್ತ ಜನರ ಹಾದಿ ತಪ್ಪಿಸುತ್ತಿದ್ದಾರೆ. ಮತ್ತೊಂದೆಡೆ ಮೋದಿ ಹೆಸರು ಹೇಳಿಕೊಂಡು ತಮಗೆ ಮತ ಹಾಕಿ ಎಂದು ಕೇಳುತ್ತಿದ್ದಾರೆ. ಈ ರೀತಿ ಕೇಳಲು ನಾಚಿಕೆ ಆಗುವುದಿಲ್ಲವೇ? ಧೈರ್ಯವಿದ್ದರೆ ತಾನು ಮಾಡಿದ ಕೆಲವನ್ನು ವಿವರಿಸುತ್ತ ಜನರ ಬೆಂಬಲ ಪಡೆದು ಗೆಲುವು ಸಾಧಿಸಿ ತೋರಿಸಲಿ’ ಎಂದು ಸವಾಲು ಹಾಕಿದರು.