<p>ಮಡಿಕೇರಿ: ಶಾಲಾ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ರಜೆ ನೀಡಿ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ. ಆದರೂ, ಅನೇಕ ಖಾಸಗಿ ಶಾಲೆಗಳು 2020-21ನೇ ಸಾಲಿನ ದಾಖಲಾತಿಯನ್ನು ಮಾರ್ಚ್ 31ರ ಒಳಗೆ ಶುಲ್ಕ ಪಾವತಿ ಮಾಡಿಕೊಳ್ಳಬೇಕೆಂದು ಪೋಷಕರಿಗೆ ಒತ್ತಾಯಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಸದ್ಯಕ್ಕೆ ದಾಖಲಾತಿ ಮಾಡಿಕೊಳ್ಳುವಂತಿಲ್ಲ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೋ ತಿಳಿಸಿದ್ದಾರೆ.<br /><br />ಶಾಲಾ ಆಡಳಿತ ಮಂಡಳಿಗಳು ಸೂಚನೆ ಪಾಲಿಸದೇ ನಿಯಮ ಉಲ್ಲಂಘಿಸಿದರೆ ಸಾಂಕ್ರಾಮಿಕ ರೋಗಗಳ ಅಧಿನಿಯಮ 1897ರ ಸೆಕ್ಷನ್ 3ರಂತೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.<br /><br />ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳು 2020-21ನೇ ಸಾಲಿನ ಮಕ್ಕಳ ದಾಖಲಾತಿಯನ್ನು ಸರ್ಕಾರದ ಮುಂದಿನ ಆದೇಶದವರೆಗೆ ಮುಂದೂಡುವುದು. ಯಾವುದೇ ಕಾರಣಕ್ಕೂ ದಾಖಲಾತಿ ಪ್ರಕ್ರಿಯೆಯನ್ನು ಕೈಗೊಳ್ಳುವಂತಿಲ್ಲ. ಯಾವುದೇ ಸರ್ಕಾರಿ/ ಅನುದಾನಿತ/ ಅನುದಾನ ರಹಿತ ಶಾಲೆಗಳಲ್ಲಿ ಪೋಷಕರು, ವಿದ್ಯಾರ್ಥಿಗಳು ಶಾಲೆಗಳಿಗೆ ಯಾವುದೇ ಕಾರ್ಯದ ನಿಮಿತ್ತ ಭೇಟಿ ನೀಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಶಾಲಾ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ರಜೆ ನೀಡಿ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ. ಆದರೂ, ಅನೇಕ ಖಾಸಗಿ ಶಾಲೆಗಳು 2020-21ನೇ ಸಾಲಿನ ದಾಖಲಾತಿಯನ್ನು ಮಾರ್ಚ್ 31ರ ಒಳಗೆ ಶುಲ್ಕ ಪಾವತಿ ಮಾಡಿಕೊಳ್ಳಬೇಕೆಂದು ಪೋಷಕರಿಗೆ ಒತ್ತಾಯಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಸದ್ಯಕ್ಕೆ ದಾಖಲಾತಿ ಮಾಡಿಕೊಳ್ಳುವಂತಿಲ್ಲ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೋ ತಿಳಿಸಿದ್ದಾರೆ.<br /><br />ಶಾಲಾ ಆಡಳಿತ ಮಂಡಳಿಗಳು ಸೂಚನೆ ಪಾಲಿಸದೇ ನಿಯಮ ಉಲ್ಲಂಘಿಸಿದರೆ ಸಾಂಕ್ರಾಮಿಕ ರೋಗಗಳ ಅಧಿನಿಯಮ 1897ರ ಸೆಕ್ಷನ್ 3ರಂತೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.<br /><br />ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳು 2020-21ನೇ ಸಾಲಿನ ಮಕ್ಕಳ ದಾಖಲಾತಿಯನ್ನು ಸರ್ಕಾರದ ಮುಂದಿನ ಆದೇಶದವರೆಗೆ ಮುಂದೂಡುವುದು. ಯಾವುದೇ ಕಾರಣಕ್ಕೂ ದಾಖಲಾತಿ ಪ್ರಕ್ರಿಯೆಯನ್ನು ಕೈಗೊಳ್ಳುವಂತಿಲ್ಲ. ಯಾವುದೇ ಸರ್ಕಾರಿ/ ಅನುದಾನಿತ/ ಅನುದಾನ ರಹಿತ ಶಾಲೆಗಳಲ್ಲಿ ಪೋಷಕರು, ವಿದ್ಯಾರ್ಥಿಗಳು ಶಾಲೆಗಳಿಗೆ ಯಾವುದೇ ಕಾರ್ಯದ ನಿಮಿತ್ತ ಭೇಟಿ ನೀಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>