ಅದಕ್ಕೆ ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಮಾತನಾಡಿ, ‘ಭಾರತದ ಇತಿಹಾಸದಲ್ಲಿಯೇ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದವರಿಗೆ ₹ 10 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲಾಗುತ್ತಿದೆ. ಎನ್ಡಿಆರ್ಎಫ್ ನಿಯಮದಂತೆ ₹ 6 ಲಕ್ಷದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶವಿದೆ. ಆದರೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಶೇಷ ಕಾಳಜಿ ವಹಿಸಿ ಎರಡು ಬೆಡ್ರೂಂವುಳ್ಳ ಮನೆಯನ್ನೇ ನಿರ್ಮಿಸಿಕೊಡಲು ಮುಂದಾಗಿದ್ದಾರೆ. ₹ 10 ಲಕ್ಷದ ಮನೆಗೆ ಆರ್ಥಿಕ ಇಲಾಖೆಯೂ ಆಕ್ಷೇಪ ವ್ಯಕ್ತಪಡಿಸಿತ್ತು’ ಎಂದು ಸಂತ್ರಸ್ತರಿಗೆ ತಿಳಿಸಿದರು.