ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಣಿಕೊಪ್ಪಲು: ಸ್ನಾತಕೋತ್ತರ ಕೇಂದ್ರದಲ್ಲಿ ವಿದ್ಯಾರ್ಥಿನಿಗೆ ಸೀಮಂತ

Last Updated 11 ಜನವರಿ 2019, 14:35 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ, ಸನ್ಮಾನ ಮಾಡುವುದು ಸಾಮಾನ್ಯ. ಆದರೆ ಸೀಮಂತ ಕಾರ್ಯಕ್ರಮಕ್ಕೆ ಇಲ್ಲಿನ ಕಾವೇರಿ ಕಾಲೇಜಿನ ಎಂ.ಕಾಂ.ಸ್ನಾತಕೋತ್ತರ ಕೇಂದ್ರ ಸಾಕ್ಷಿಯಾಯಿತು.

ಎಂ.ಕಾಂ. ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲಿನಿ ಅವರ ಸೀಮಂತ ಕಾರ್ಯಕ್ರಮ ಗುರುವಾರ ನಡೆಯಿತು.

ಪಾಲಿಬೆಟ್ಟದ ಶಾಲಿನಿ ಅವರಿಗೆ ಸಹಪಾಠಿಗಳು ಹಾಗೂ ಉಪನ್ಯಾಸಕರು ಶಾಸ್ತ್ರೋಕ್ತವಾಗಿ ಉಡಿತುಂಬಿದರು.

‘ವಿವಾಹವಾದ ಮೇಲೂ ಹೆಣ್ಣುಮಕ್ಕಳನ್ನು ಉನ್ನತ ವ್ಯಾಸಂಗಕ್ಕೆ ಕಳಿಸಿರುವುದು ಶ್ಲಾಘನೀಯ. ಆದ್ದರಿಂದ ಕಾಲೇಜಿನಲ್ಲಿ ಅವರಿಗೆ ಸೀಮಂತ ಮಾಡಲಾಯಿತು ಎಂದು ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಸ್.ಆರ್.ಉಷಾಲತಾ ತಿಳಿಸಿದರು.

ಪತಿ ಎಚ್‌.ಎಸ್‌.ಸಯಾಜ್, ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥೆ ಡಾ.ಬೀನಾ, ಸಹಾಯಕ ಪ್ರಾಧ್ಯಾಪಕರಾದ ಮುದ್ದಪ್ಪ, ನಿತ್ಯಾ, ನಿರ್ಮಲಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT