ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ನಿಸರ್ಗಧಾಮ : ಪ್ರವಾಸಿಗರ ಸಂಖ್ಯೆ ಇಳಿಕೆ

Last Updated 18 ಏಪ್ರಿಲ್ 2019, 14:36 IST
ಅಕ್ಷರ ಗಾತ್ರ

ಕುಶಾಲನಗರ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಗುರುವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿತು.

ಕುಶಾಲನಗರ ಸಮೀಪದ ಕಾವೇರಿ ನಿಸರ್ಗಧಾಮ, ದುಬಾರೆ ಸಾಕಾನೆ ಶಿಬಿರ, ಹಾರಂಗಿ ಜಲಾಶಯ ಸೇರಿದಂತೆ ಸುತ್ತಮುತ್ತಲ ಪ್ರವಾಸಿ ಕೇಂದ್ರಗಳಲ್ಲಿ ಚುನಾವಣೆ ಇಲ್ಲದ ಕೇರಳ ಹಾಗೂ ತಮಿಳುನಾಡು ರಾಜ್ಯ ಪ್ರವಾಸಿಗರ ಸಂಖ್ಯೆ ಅಧಿಕವಾಗಿತ್ತು. ಅಲ್ಲದೇ, ಮೂರನೇ ಹಂತದಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳ ಪ್ರವಾಸಿಗರು ಕಂಡು ಬಂದರು.

ಕೇರಳದಲ್ಲಿ ಚುನಾವಣೆ ಇಲ್ಲದ ಹಿನ್ನೆಲೆಯಲ್ಲಿ ಹಾಗೂ ಗುಡೆಪ್ರೈಡ್ ಅಂಗವಾಗಿ ಮೂರು ದಿನಗಳ ರಜೆ ಇರುವ ಕಾರಣದಿಂದ ಕುಟುಂಬ ಸಮೇತರಾಗಿ ಕೊಡಗಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದೇವೆ ಎಂದು ಜೋಸೆಫ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT