ಕುಶಾಲನಗರ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಗುರುವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿತು.
ಕುಶಾಲನಗರ ಸಮೀಪದ ಕಾವೇರಿ ನಿಸರ್ಗಧಾಮ, ದುಬಾರೆ ಸಾಕಾನೆ ಶಿಬಿರ, ಹಾರಂಗಿ ಜಲಾಶಯ ಸೇರಿದಂತೆ ಸುತ್ತಮುತ್ತಲ ಪ್ರವಾಸಿ ಕೇಂದ್ರಗಳಲ್ಲಿ ಚುನಾವಣೆ ಇಲ್ಲದ ಕೇರಳ ಹಾಗೂ ತಮಿಳುನಾಡು ರಾಜ್ಯ ಪ್ರವಾಸಿಗರ ಸಂಖ್ಯೆ ಅಧಿಕವಾಗಿತ್ತು. ಅಲ್ಲದೇ, ಮೂರನೇ ಹಂತದಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳ ಪ್ರವಾಸಿಗರು ಕಂಡು ಬಂದರು.
ಕೇರಳದಲ್ಲಿ ಚುನಾವಣೆ ಇಲ್ಲದ ಹಿನ್ನೆಲೆಯಲ್ಲಿ ಹಾಗೂ ಗುಡೆಪ್ರೈಡ್ ಅಂಗವಾಗಿ ಮೂರು ದಿನಗಳ ರಜೆ ಇರುವ ಕಾರಣದಿಂದ ಕುಟುಂಬ ಸಮೇತರಾಗಿ ಕೊಡಗಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದೇವೆ ಎಂದು ಜೋಸೆಫ್ ತಿಳಿಸಿದರು.