<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಆಶ್ರಯ ಕಳೆದುಕೊಂಡವರಿಗೆ ಪರಿಹಾರ ಕಾರ್ಯ ವಿಳಂಬ ಆಗುತ್ತಿರುವ ಬೆನ್ನಲೇ ಸಂತ್ರಸ್ತರ ಆಕ್ರೋಶ ಹೆಚ್ಚಾಗುತ್ತಿದೆ.</p>.<p>ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ ಸಭೆಯಲ್ಲೂ ಪರಿಹಾರ ಹಾಗೂ ಮನೆ ನಿರ್ಮಾಣ ಕಾರ್ಯ ವಿಳಂಬ ಖಂಡಿಸಿ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಕ್ಕಂದೂರು ನಿವಾಸಿ ಕುಡೇಕಲ್ ಸಂತೋಷ್ ಮಾತನಾಡಿ, ‘ಮಾದರಿ ಮನೆಗಳಲ್ಲಿ ಸೌಲಭ್ಯಗಳಿಲ್ಲ. ಬಟ್ಟೆ ಇಟ್ಟುಕೊಳ್ಳಲು ಸ್ಲ್ಯಾಬ್ ಸೇರಿದಂತೆ ಯಾವ ಸೌಲಭ್ಯಗಳೂ ಇಲ್ಲವಾಗಿವೆ. ಅದೇ ಮಾದರಿಯ ಮನೆ ನಿರ್ಮಾಣವಾದರೆ ವಾಸಿಸಲು ಸಾಧ್ಯವಿಲ್ಲ. ಕನಿಷ್ಠ 7 ಸೆಂಟ್ ಜಾಗದಲ್ಲಿ ಮನೆ ಕಟ್ಟಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಅದಕ್ಕೆ ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಮಾತನಾಡಿ, ‘ಭಾರತದ ಇತಿಹಾಸದಲ್ಲಿಯೇ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದವರಿಗೆ ₹ 10 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲಾಗುತ್ತಿದೆ. ಎನ್ಡಿಆರ್ಎಫ್ ನಿಯಮದಂತೆ ₹ 6 ಲಕ್ಷದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶವಿದೆ. ಆದರೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಶೇಷ ಕಾಳಜಿ ವಹಿಸಿ ಎರಡು ಬೆಡ್ರೂಂವುಳ್ಳ ಮನೆಯನ್ನೇ ನಿರ್ಮಿಸಿಕೊಡಲು ಮುಂದಾಗಿದ್ದಾರೆ. ₹ 10 ಲಕ್ಷದ ಮನೆಗೆ ಆರ್ಥಿಕ ಇಲಾಖೆಯೂ ಆಕ್ಷೇಪ ವ್ಯಕ್ತಪಡಿಸಿತ್ತು’ ಎಂದು ಸಂತ್ರಸ್ತರಿಗೆ ತಿಳಿಸಿದರು.</p>.<p>‘ಮೂರು ತಿಂಗಳಲ್ಲಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ತೋಟ ಕುಸಿದಿರುವುದಕ್ಕೆ ಹೆಕ್ಟೇರ್ಗೆ ₹ 37 ಸಾವಿರ ಪರಿಹಾರ ನೀಡಲು ಮಾತ್ರ ಅವಕಾಶವಿದೆ. ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದರೆ ಮಾತ್ರ ದೊಡ್ಡಮೊತ್ತದ ಪರಿಹಾರ ವಿತರಣೆ ಮಾಡಲು ಸಾಧ್ಯವಾಗಲಿದೆ’ ಎಂದು ಹೇಳಿದರು.</p>.<p>ಸಂತ್ರಸ್ತರ ಸತೀಶ್ ಮಾತನಾಡಿ, ‘ತೋಟ ಕಳೆದುಕೊಂಡವರಿಗೆ ಸರ್ಕಾರ ಯಾವುದೇ ಪರಿಹಾರ ನೀಡಲು ಮುಂದಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಭೆ ವಿಳಂಬ–ಪ್ರತಿಭಟನೆ: ಮಧ್ಯಾಹ್ನ ಸಭೆ ನಿಗದಿ ಆಗಿತ್ತು. ಆದರೆ, ಸಂಜೆ 4 ಗಂಟೆಯಾದರೂ ಸಭೆ ಆರಂಭಗೊಳ್ಳದಿದ್ದ ಕಾರಣ ಸಂತ್ರಸ್ತರು ಕಾವೇರಿ ಕಲಾಕ್ಷೇತ್ರದ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು.</p>.<p>ಸ್ಥಳಕ್ಕೆ ಬಂದ ಬಿಜೆಪಿ ಮುಖಂಡ ಎಂ.ಬಿ. ದೇವಯ್ಯ ಅವರು, ‘ಸರ್ಕಾರ ಈಗಾಗಲೇ ಪುನರ್ವಸತಿ ಕಾರ್ಯದಲ್ಲಿ ವಿಳಂಬ ಧೋರಣೆ ಅನುಸರಿಸಿದೆ. ಇನ್ನೂ ವಿಳಂಬ ಮಾಡಬಾರದು’ ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಆಶ್ರಯ ಕಳೆದುಕೊಂಡವರಿಗೆ ಪರಿಹಾರ ಕಾರ್ಯ ವಿಳಂಬ ಆಗುತ್ತಿರುವ ಬೆನ್ನಲೇ ಸಂತ್ರಸ್ತರ ಆಕ್ರೋಶ ಹೆಚ್ಚಾಗುತ್ತಿದೆ.</p>.<p>ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ ಸಭೆಯಲ್ಲೂ ಪರಿಹಾರ ಹಾಗೂ ಮನೆ ನಿರ್ಮಾಣ ಕಾರ್ಯ ವಿಳಂಬ ಖಂಡಿಸಿ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಕ್ಕಂದೂರು ನಿವಾಸಿ ಕುಡೇಕಲ್ ಸಂತೋಷ್ ಮಾತನಾಡಿ, ‘ಮಾದರಿ ಮನೆಗಳಲ್ಲಿ ಸೌಲಭ್ಯಗಳಿಲ್ಲ. ಬಟ್ಟೆ ಇಟ್ಟುಕೊಳ್ಳಲು ಸ್ಲ್ಯಾಬ್ ಸೇರಿದಂತೆ ಯಾವ ಸೌಲಭ್ಯಗಳೂ ಇಲ್ಲವಾಗಿವೆ. ಅದೇ ಮಾದರಿಯ ಮನೆ ನಿರ್ಮಾಣವಾದರೆ ವಾಸಿಸಲು ಸಾಧ್ಯವಿಲ್ಲ. ಕನಿಷ್ಠ 7 ಸೆಂಟ್ ಜಾಗದಲ್ಲಿ ಮನೆ ಕಟ್ಟಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಅದಕ್ಕೆ ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಮಾತನಾಡಿ, ‘ಭಾರತದ ಇತಿಹಾಸದಲ್ಲಿಯೇ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದವರಿಗೆ ₹ 10 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲಾಗುತ್ತಿದೆ. ಎನ್ಡಿಆರ್ಎಫ್ ನಿಯಮದಂತೆ ₹ 6 ಲಕ್ಷದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶವಿದೆ. ಆದರೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಶೇಷ ಕಾಳಜಿ ವಹಿಸಿ ಎರಡು ಬೆಡ್ರೂಂವುಳ್ಳ ಮನೆಯನ್ನೇ ನಿರ್ಮಿಸಿಕೊಡಲು ಮುಂದಾಗಿದ್ದಾರೆ. ₹ 10 ಲಕ್ಷದ ಮನೆಗೆ ಆರ್ಥಿಕ ಇಲಾಖೆಯೂ ಆಕ್ಷೇಪ ವ್ಯಕ್ತಪಡಿಸಿತ್ತು’ ಎಂದು ಸಂತ್ರಸ್ತರಿಗೆ ತಿಳಿಸಿದರು.</p>.<p>‘ಮೂರು ತಿಂಗಳಲ್ಲಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ತೋಟ ಕುಸಿದಿರುವುದಕ್ಕೆ ಹೆಕ್ಟೇರ್ಗೆ ₹ 37 ಸಾವಿರ ಪರಿಹಾರ ನೀಡಲು ಮಾತ್ರ ಅವಕಾಶವಿದೆ. ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದರೆ ಮಾತ್ರ ದೊಡ್ಡಮೊತ್ತದ ಪರಿಹಾರ ವಿತರಣೆ ಮಾಡಲು ಸಾಧ್ಯವಾಗಲಿದೆ’ ಎಂದು ಹೇಳಿದರು.</p>.<p>ಸಂತ್ರಸ್ತರ ಸತೀಶ್ ಮಾತನಾಡಿ, ‘ತೋಟ ಕಳೆದುಕೊಂಡವರಿಗೆ ಸರ್ಕಾರ ಯಾವುದೇ ಪರಿಹಾರ ನೀಡಲು ಮುಂದಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಭೆ ವಿಳಂಬ–ಪ್ರತಿಭಟನೆ: ಮಧ್ಯಾಹ್ನ ಸಭೆ ನಿಗದಿ ಆಗಿತ್ತು. ಆದರೆ, ಸಂಜೆ 4 ಗಂಟೆಯಾದರೂ ಸಭೆ ಆರಂಭಗೊಳ್ಳದಿದ್ದ ಕಾರಣ ಸಂತ್ರಸ್ತರು ಕಾವೇರಿ ಕಲಾಕ್ಷೇತ್ರದ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು.</p>.<p>ಸ್ಥಳಕ್ಕೆ ಬಂದ ಬಿಜೆಪಿ ಮುಖಂಡ ಎಂ.ಬಿ. ದೇವಯ್ಯ ಅವರು, ‘ಸರ್ಕಾರ ಈಗಾಗಲೇ ಪುನರ್ವಸತಿ ಕಾರ್ಯದಲ್ಲಿ ವಿಳಂಬ ಧೋರಣೆ ಅನುಸರಿಸಿದೆ. ಇನ್ನೂ ವಿಳಂಬ ಮಾಡಬಾರದು’ ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>