<p><strong>ನಾಪೋಕ್ಲು</strong>: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ನಾಪೋಕ್ಲು ಪಟ್ಟಣದಲ್ಲೂ ಜನರು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿತ್ತು.</p>.<p>ಜನರು ಗುಂಪುಗೂಡುವುದನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಗುರುವಾರ ನಿರ್ಬಂಧ ಸಡಿಲಿಸಲಾಗಿದ್ದು ವ್ಯಾಪಾರ ವಹಿವಾಟಿಗೆ ಹೆಚ್ಚಿನ ಸಮಯ ನಿಗದಿಗೊಳಿಸಿದ್ದರಿಂದ ಜನಸಂಚಾರ ಕಡಿಮೆ ಇತ್ತು.</p>.<p>ದಿನಸಿ ಅಂಗಡಿಗಳಲ್ಲಿ ಹಾಗೂ ಔಷಧಿ ಅಂಗಡಿಗಳಲ್ಲಿ ಮಧ್ಯಾಹ್ನದವರೆಗೆ ಜನರು ದಿನಸಿ ಹಾಗೂ ಔಷಧಿಗಳನ್ನು ಖರೀದಿಸಿದರು.</p>.<p>ಜನರು ಗುಂಪು ಸೇರದಂತೆ ಗ್ರಾಮಪಂಚಾಯಿತಿ ವತಿಯಿಂದ ನಿರ್ಬಂಧ ಹೇರಲಾಗಿತ್ತು.</p>.<p>ದಿನಸಿ ಅಂಗಡಿಗಳಲ್ಲಿ ಅಗತ್ಯವಸ್ತುಗಳ ಬೆಲೆ ಏರಿಕೆ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಪಿಡಿಒ ಚೋಂದಕಿ ಹಾಗೂ ಗ್ರಾಮಪಂಚಾಯಿತಿ ಸದಸ್ಯರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.</p>.<p>ಪಟ್ಟಣದ ಪ್ರಮುಖ ದಿನಸಿ ಅಂಗಡಿಗಳ ಎದುರು ವೃತ್ತಗಳನ್ನು ಅಳವಡಿಸಲಾಗಿದ್ದು ಜನರು ಅಂತರ ಕಾಯ್ದುಕೊಂಡು ಸಾಮಗ್ರಿಗಳನ್ನು ಖರೀದಿಸುವಂತೆ ಸೂಚಿಸಲಾಯಿತು.</p>.<p>ಜಿಲ್ಲಾಡಳಿತದ ಸೂಚನೆ ಮೇರೆಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ವ್ಯಾಪಾರ ವಹಿವಾಟು ನಡೆಸಲಾಯಿತು. ಬಳಿಕ ಜನ ಸಂಚಾರ ಹಾಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಮಧ್ಯಾಹ್ನದ ವೇಳೆಗೆ ಪಟ್ಟಣದಲ್ಲಿ ಜನಸಂಚಾರ ಹಾಗೂ ವಾಹನ ಸಂಚಾರವಿಲ್ಲದೇ ಬಿಕೋ ಎನ್ನುತ್ತಿತ್ತು.</p>.<p>ಪಟ್ಟಣದ ಔಷಧಿ ಅಂಗಡಿಗಳಲ್ಲಿ ಔಷಧಿಗಳ ಕೊರತೆ ಕಂಡುಬಂತು. ವಿವಿಧ ಔಷಧಿ ಅಂಗಡಿಗಳ ಮಾಲೀಕರು ಜನರಿಗೆ ಅಗತ್ಯವಿರುವ ಔಷಧಿಗಳನ್ನು ಯಾವುದೇ ಸಮಯದಲ್ಲಿ ಪೂರೈಕೆ ಮಾಡುವುದಾಗಿ ಹೇಳಿದರು.</p>.<p>ಗುರುಕೃಪ ಮೆಡಿಕಲ್ಸ್ ನ ಮಾಲೀಕ ಎನ್.ಎಸ್.ದಿನೇಶ್ ಮಾತನಾಡಿ, ಔಷಧಿಗಳ ದಾಸ್ತಾನು ಬಾರದ ಕಾರಣ, ತೊಂದರೆಯಾಗಿದೆ. ನಾಪೋಕ್ಲು ವ್ಯಾಪ್ತಿಯ ಜನರಿಗೆ ಔಷಧಿಗಳನ್ನು ಯಾವುದೇ ಸಮಯದಲ್ಲಿ ಪೂರೈಸಲು ಸಿದ್ದರಿದ್ದೇವೆ. ಅಗತ್ಯ ಔಷಧಿಗಳನ್ನು ಕಳುಹಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.</p>.<p>ನಾಪೋಕ್ಲು ಪಟ್ಟಣದ ಅಂಗಡಿಗಳಲ್ಲಿ ವಸ್ತುಗಳಿಗೆ ಅಧಿಕ ಹಣ ಪಡೆಯದಂತೆ ಮತ್ತು ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಗ್ರಾಮಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಶಮ ಮೆಡಿಕಲ್ಸ್ ನ ಮಾಲೀಕ ಮನ್ಸೂರ್ ಆಲಿ ಮತ್ತಿತರರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು</strong>: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ನಾಪೋಕ್ಲು ಪಟ್ಟಣದಲ್ಲೂ ಜನರು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿತ್ತು.</p>.<p>ಜನರು ಗುಂಪುಗೂಡುವುದನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಗುರುವಾರ ನಿರ್ಬಂಧ ಸಡಿಲಿಸಲಾಗಿದ್ದು ವ್ಯಾಪಾರ ವಹಿವಾಟಿಗೆ ಹೆಚ್ಚಿನ ಸಮಯ ನಿಗದಿಗೊಳಿಸಿದ್ದರಿಂದ ಜನಸಂಚಾರ ಕಡಿಮೆ ಇತ್ತು.</p>.<p>ದಿನಸಿ ಅಂಗಡಿಗಳಲ್ಲಿ ಹಾಗೂ ಔಷಧಿ ಅಂಗಡಿಗಳಲ್ಲಿ ಮಧ್ಯಾಹ್ನದವರೆಗೆ ಜನರು ದಿನಸಿ ಹಾಗೂ ಔಷಧಿಗಳನ್ನು ಖರೀದಿಸಿದರು.</p>.<p>ಜನರು ಗುಂಪು ಸೇರದಂತೆ ಗ್ರಾಮಪಂಚಾಯಿತಿ ವತಿಯಿಂದ ನಿರ್ಬಂಧ ಹೇರಲಾಗಿತ್ತು.</p>.<p>ದಿನಸಿ ಅಂಗಡಿಗಳಲ್ಲಿ ಅಗತ್ಯವಸ್ತುಗಳ ಬೆಲೆ ಏರಿಕೆ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಪಿಡಿಒ ಚೋಂದಕಿ ಹಾಗೂ ಗ್ರಾಮಪಂಚಾಯಿತಿ ಸದಸ್ಯರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.</p>.<p>ಪಟ್ಟಣದ ಪ್ರಮುಖ ದಿನಸಿ ಅಂಗಡಿಗಳ ಎದುರು ವೃತ್ತಗಳನ್ನು ಅಳವಡಿಸಲಾಗಿದ್ದು ಜನರು ಅಂತರ ಕಾಯ್ದುಕೊಂಡು ಸಾಮಗ್ರಿಗಳನ್ನು ಖರೀದಿಸುವಂತೆ ಸೂಚಿಸಲಾಯಿತು.</p>.<p>ಜಿಲ್ಲಾಡಳಿತದ ಸೂಚನೆ ಮೇರೆಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ವ್ಯಾಪಾರ ವಹಿವಾಟು ನಡೆಸಲಾಯಿತು. ಬಳಿಕ ಜನ ಸಂಚಾರ ಹಾಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಮಧ್ಯಾಹ್ನದ ವೇಳೆಗೆ ಪಟ್ಟಣದಲ್ಲಿ ಜನಸಂಚಾರ ಹಾಗೂ ವಾಹನ ಸಂಚಾರವಿಲ್ಲದೇ ಬಿಕೋ ಎನ್ನುತ್ತಿತ್ತು.</p>.<p>ಪಟ್ಟಣದ ಔಷಧಿ ಅಂಗಡಿಗಳಲ್ಲಿ ಔಷಧಿಗಳ ಕೊರತೆ ಕಂಡುಬಂತು. ವಿವಿಧ ಔಷಧಿ ಅಂಗಡಿಗಳ ಮಾಲೀಕರು ಜನರಿಗೆ ಅಗತ್ಯವಿರುವ ಔಷಧಿಗಳನ್ನು ಯಾವುದೇ ಸಮಯದಲ್ಲಿ ಪೂರೈಕೆ ಮಾಡುವುದಾಗಿ ಹೇಳಿದರು.</p>.<p>ಗುರುಕೃಪ ಮೆಡಿಕಲ್ಸ್ ನ ಮಾಲೀಕ ಎನ್.ಎಸ್.ದಿನೇಶ್ ಮಾತನಾಡಿ, ಔಷಧಿಗಳ ದಾಸ್ತಾನು ಬಾರದ ಕಾರಣ, ತೊಂದರೆಯಾಗಿದೆ. ನಾಪೋಕ್ಲು ವ್ಯಾಪ್ತಿಯ ಜನರಿಗೆ ಔಷಧಿಗಳನ್ನು ಯಾವುದೇ ಸಮಯದಲ್ಲಿ ಪೂರೈಸಲು ಸಿದ್ದರಿದ್ದೇವೆ. ಅಗತ್ಯ ಔಷಧಿಗಳನ್ನು ಕಳುಹಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.</p>.<p>ನಾಪೋಕ್ಲು ಪಟ್ಟಣದ ಅಂಗಡಿಗಳಲ್ಲಿ ವಸ್ತುಗಳಿಗೆ ಅಧಿಕ ಹಣ ಪಡೆಯದಂತೆ ಮತ್ತು ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಗ್ರಾಮಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಶಮ ಮೆಡಿಕಲ್ಸ್ ನ ಮಾಲೀಕ ಮನ್ಸೂರ್ ಆಲಿ ಮತ್ತಿತರರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>