ಜೀವಹಾನಿ, ಭೂಕುಸಿತ, ಮನೆ, ಕೃಷಿ ಬೆಳೆ ನಾಶದಿಂದ ಕಾಫಿ, ಭತ್ತ, ಕಾಳುಮೆಣಸು, ಅಡಿಕೆ ಬೆಳೆಗಳು ನೆಲ ಕಚ್ಚಿರುವುದರಿಂದ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಜತೆಗೆ, ರಾಷ್ಟ್ರೀಕೃತ ಮತ್ತು ಸಹಕಾರ ಸಂಘಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡುವ ಮೂಲಕ ಸ್ಪಂದಿಸಬೇಕು ಎಂದು ರೈತ ಸಂಘದ ವತಿಯಿಂದ ಸಲಹೆ ನೀಡಲಾಯಿತು.