ಭಾರತವನ್ನು 2025 ರ ವೇಳೆಗೆ ಕ್ಷಯ ಮುಕ್ತವನ್ನಾಗಿಸುವ ಮಹತ್ತರ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ಅಭಿಯಾನದಡಿಯಲ್ಲಿ ಪ್ರತಿಯೊಬ್ಬ ಕ್ಷಯರೋಗಿಯನ್ನು ಅವರ ಚಿಕಿತ್ಸೆಯ ಸಂದರ್ಭದಲ್ಲಿ ದತ್ತು ಪಡೆದುಕೊಂಡು ಅವರಿಗೆ ಬೇಕಾದ ಪೌಷ್ಟಿಕ ಅಹಾರ, ಚಿಕಿತ್ಸೆ ಮತ್ತು ಬೆಂಬಲ, ಕೌಶಲ್ಯಾಧರಿತ ತರಬೇತಿ ಹಾಗೂ ಹೆಚ್ಚುವರಿ ಪೌಷ್ಟಿಕ ಪೂರಕ ಅಹಾರ ನೀಡಲು ಸಹಕಾರ ಸಂಘಗಳು, ಸ್ವಯಂಸೇವಾ ಸಂಸ್ಥೆಗಳು, ಇತರ ಸಂಘ ಸಂಸ್ಥೆಗಳು, ಚುನಾಯಿತ ಪ್ರತಿನಿಧಿಗಳು, ರಾಜಕೀಯ ಪಕ್ಷಗಳು, ಉದ್ಯಮಿಗಳು ಹಾಗೂ ಇತರೆ ದಾನಿಗಳು ಕನಿಷ್ಠ 1ರಿಂದ 3 ವರ್ಷಗಳ ಅವಧಿಗೆ ‘ನಿಕ್ಷಯ್ ಮಿತ್ರ’ರಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.