<p><strong>ಕುಶಾಲನಗರ: </strong>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ಡೌನ್ ಮುಂದುವರೆದಿದ್ದು, ಇಲ್ಲಿನ ಚೆಕ್ಪೋಸ್ಟ್ನಿಂದ ಜಿಲ್ಲೆಗೆ ಬರುವ ಎಲ್ಲ ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ.</p>.<p>ಪಟ್ಟಣದ ಟೋಲ್ಗೇಟ್ನಲ್ಲಿ ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಬರುವ ಕಾರ್ಮಿಕರನ್ನು ಪರಿಶೀಲನೆ ನಡೆಸಿ ಹೊರ ರಾಜ್ಯಗಳ ಕಾರ್ಮಿಕರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಅಕ್ಕಪಕ್ಕದ ಜಿಲ್ಲೆಗಳ ಕಾರ್ಮಿಕರಿಗೆ ಸೀಲ್ ಹಾಕಿ ತೋಟದ ಲೈನ್ ಮನೆಗಳಲ್ಲಿ ಹೋಂ ಕ್ವಾರಂಟೈನ್ ಆಗುವಂತೆ ಸೂಚನೆ ನೀಡಲಾಗುತ್ತಿದೆ.</p>.<p>ಕಾರ್ಮಿಕರಿಗೆ ಪ್ರವೇಶ ನೀಡದ ಹಿನ್ನೆಲೆಯಲ್ಲಿ ಊಟ ತಿಂಡಿ ಇಲ್ಲದೆ ಪರದಾಡಿದರು. ಉತ್ತರ ಭಾರತದ 50ಕ್ಕೂ ಅಧಿಕ ಕಾರ್ಮಿಕ ಕುಟುಂಬಗಳು ಬುಧವಾರ ರಾತ್ರಿ ಬಸ್ ಮೂಲಕ ಬಂದಾಗ ಗಡಿಯಲ್ಲಿ ತಪಾಸಣಾ ಅಧಿಕಾರಿಗಳು ತಡೆಯೊಡ್ಡಿದರು.</p>.<p>ಇನ್ನೊಂದೆಡೆ ಕುಶಾಲನಗರ ವಾಹನ ತಪಾಸಣಾ ಕೇಂದ್ರದ ಮೂಲಕ ದಾಖಲೆ ಪರಿಶೀಲಿಸಿ ಸೀಲ್ ಹಾಕುವುದರೊಂದಿಗೆ ನೂರಕ್ಕೂ ಅಧಿಕ ಮಂದಿ ಕಾರ್ಮಿಕರನ್ನು ಜಿಲ್ಲೆಗೆ ಪ್ರವೇಶಿಸಲು ಅನುವು ಮಾಡಿಕೊಡಲಾಯಿತು.</p>.<p>ಕೆಲವರು ಕೊಪ್ಪ ಸೇತುವೆ ಮೂಲಕ ನಡೆದುಕೊಂಡು ಕುಶಾಲನಗರದತ್ತ ತೆರಳಿದ್ದಾರೆ. ಈ ನಡುವೆ ಬಸ್ ಚಾಲಕ ಪರಾರಿಯಾಗಿದ್ದು, ಬಸ್ಅನ್ನು ಬೈಲುಕೊಪ್ಪ ಪೊಲೀಸರ ವಶಕ್ಕೆ ನೀಡಲಾಗಿದೆ.</p>.<p>ಸಮಸ್ಯೆಗೊಳಗಾದ ವಲಸಿಗ ಕಾರ್ಮಿಕರ ಕುಟುಂಬದ ಮಕ್ಕಳು, ಮಹಿಳೆಯರಿಗೆ ಬೈಲುಕೊಪ್ಪೆಯ ರಿಚ್ ಫೋರ್ಟ್ ಹೋಟೆಲ್ ಮಾಲೀಕ ಅಣ್ಣಪ್ಪ ಅವರು ರಾತ್ರಿ ಆಸರೆ ನೀಡಿ, ಊಟದ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮರೆದಿದ್ದಾರೆ.</p>.<p>‘ಗುವಾಹಟಿಯಿಂದ ಬೆಂಗಳೂರಿಗೆ ರೈಲು ಮೂಲಕ ಬಂದ ಕಾರ್ಮಿಕರನ್ನು ಕೊಡಗು ಜಿಲ್ಲೆಯ ಸುಂಟಿಕೊಪ್ಪ, ಸಿದ್ದಾಪುರ, ಮಡಿಕೇರಿ ಕಡೆಯ ಕಾಫಿ ತೋಟಗಳಿಗೆ ಹಾಗೂ ನೆಲ್ಲಿಹುದಿಕೇರಿಯ ಇಟ್ಟಿಗೆ ಕಾರ್ಖಾನೆಗೆ ಕಳುಹಿಸಿಕೊಡುವಂತೆ ಮಾಲೀಕರು ತಿಳಿಸಿದ್ದರು’ ಎಂದು ಮೇಸ್ತ್ರಿ ಅಳಲು ತೋಡಿಕೊಂಡಿದ್ದಾರೆ.</p>.<p>ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಕಾರ್ಮಿಕರನ್ನು ವಾಪಾಸ್ ಅವರ ಸ್ವಂತ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಆದರೂ ಕಾರ್ಮಿಕರು ಜಿಲ್ಲೆಯ ವಿವಿಧ ಗಡಿಗಳ ಮೂಲಕ ಸಿದ್ದಾಪುರ ಸುಂಟಿಕೊಪ್ಪ, ಗೋಣಿಕೊಪ್ಪ ಕಡೆಗೆ ತೆರಳಿದ್ದಾರೆ ಎನ್ನಲಾಗಿದೆ.</p>.<p>ಅಸ್ಸಾಂನ ಸುಮಾರು 20 ಕಾರ್ಮಿಕರು ಮಡಿಕೇರಿ ಸುತ್ತಮುತ್ತಲಿನ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸಲು ಮೈಸೂರು ಜಿಲ್ಲೆಯ ಕೊಪ್ಪ ಗ್ರಾಮದ ಮೂಲಕ ಗುಡ್ಡೆಹೊಸೂರು ತೆಪ್ಪದಕಂಡಿ ತೂಗು ಸೇತುವೆ ಮೂಲಕ ಬರುವುದನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.</p>.<p>ಕಾಫಿ ತೋಟಗಳ ಮಾಲೀಕರು ಕಾರ್ಮಿಕರನ್ನು ಕರೆದುಕೊಂಡು ಹೋಗಲು ಸ್ಥಳಕ್ಕೆ ಆಗಮಿಸಿದ್ದರು. ಈ ಸಂದರ್ಭ ಗ್ರಾಮಸ್ಥರು ಹಾಗೂ ಕಾಫಿ ತೋಟದ ಸಿಬ್ಬಂದಿ ನಡುವೆ ಮಾತಿನ ಚಕಮುಖಿ ನಡೆಯಿತು. ಕಾರ್ಮಿಕರನ್ನು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಯಿತು. ಕೊಡಗಿನಲ್ಲಿ ಕೋವಿಡ್ ಹತೋಟಿಗೆ ಬರುತ್ತಿಲ್ಲ. ಇಂತಹ ಸಮಯದಲ್ಲಿ ಹೊರ ರಾಜ್ಯದ ಕಾರ್ಮಿಕರು ಬರುತ್ತಿರುವುದನ್ನು ಸ್ಥಳೀಯರು ಖಂಡಿಸಿದ್ದಾರೆ.</p>.<p>ಸ್ಥಳಕ್ಕೆ ತಹಶೀಲ್ದಾರ್ ಗೋವಿಂದರಾಜ್ ಭೇಟಿ ನೀಡಿ ಎಲ್ಲ ಕಾರ್ಮಿಕರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಿ ಸೀಲ್ ಹಾಕಿ ಕಡ್ಡಾಯವಾಗಿ ತೋಟದ ಲೈನ್ ಮನೆಗಳಲ್ಲಿ ಹೋಂ ಕ್ವಾರಂಟೈನ್ ಮಾಡುವಂತೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ: </strong>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ಡೌನ್ ಮುಂದುವರೆದಿದ್ದು, ಇಲ್ಲಿನ ಚೆಕ್ಪೋಸ್ಟ್ನಿಂದ ಜಿಲ್ಲೆಗೆ ಬರುವ ಎಲ್ಲ ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ.</p>.<p>ಪಟ್ಟಣದ ಟೋಲ್ಗೇಟ್ನಲ್ಲಿ ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಬರುವ ಕಾರ್ಮಿಕರನ್ನು ಪರಿಶೀಲನೆ ನಡೆಸಿ ಹೊರ ರಾಜ್ಯಗಳ ಕಾರ್ಮಿಕರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಅಕ್ಕಪಕ್ಕದ ಜಿಲ್ಲೆಗಳ ಕಾರ್ಮಿಕರಿಗೆ ಸೀಲ್ ಹಾಕಿ ತೋಟದ ಲೈನ್ ಮನೆಗಳಲ್ಲಿ ಹೋಂ ಕ್ವಾರಂಟೈನ್ ಆಗುವಂತೆ ಸೂಚನೆ ನೀಡಲಾಗುತ್ತಿದೆ.</p>.<p>ಕಾರ್ಮಿಕರಿಗೆ ಪ್ರವೇಶ ನೀಡದ ಹಿನ್ನೆಲೆಯಲ್ಲಿ ಊಟ ತಿಂಡಿ ಇಲ್ಲದೆ ಪರದಾಡಿದರು. ಉತ್ತರ ಭಾರತದ 50ಕ್ಕೂ ಅಧಿಕ ಕಾರ್ಮಿಕ ಕುಟುಂಬಗಳು ಬುಧವಾರ ರಾತ್ರಿ ಬಸ್ ಮೂಲಕ ಬಂದಾಗ ಗಡಿಯಲ್ಲಿ ತಪಾಸಣಾ ಅಧಿಕಾರಿಗಳು ತಡೆಯೊಡ್ಡಿದರು.</p>.<p>ಇನ್ನೊಂದೆಡೆ ಕುಶಾಲನಗರ ವಾಹನ ತಪಾಸಣಾ ಕೇಂದ್ರದ ಮೂಲಕ ದಾಖಲೆ ಪರಿಶೀಲಿಸಿ ಸೀಲ್ ಹಾಕುವುದರೊಂದಿಗೆ ನೂರಕ್ಕೂ ಅಧಿಕ ಮಂದಿ ಕಾರ್ಮಿಕರನ್ನು ಜಿಲ್ಲೆಗೆ ಪ್ರವೇಶಿಸಲು ಅನುವು ಮಾಡಿಕೊಡಲಾಯಿತು.</p>.<p>ಕೆಲವರು ಕೊಪ್ಪ ಸೇತುವೆ ಮೂಲಕ ನಡೆದುಕೊಂಡು ಕುಶಾಲನಗರದತ್ತ ತೆರಳಿದ್ದಾರೆ. ಈ ನಡುವೆ ಬಸ್ ಚಾಲಕ ಪರಾರಿಯಾಗಿದ್ದು, ಬಸ್ಅನ್ನು ಬೈಲುಕೊಪ್ಪ ಪೊಲೀಸರ ವಶಕ್ಕೆ ನೀಡಲಾಗಿದೆ.</p>.<p>ಸಮಸ್ಯೆಗೊಳಗಾದ ವಲಸಿಗ ಕಾರ್ಮಿಕರ ಕುಟುಂಬದ ಮಕ್ಕಳು, ಮಹಿಳೆಯರಿಗೆ ಬೈಲುಕೊಪ್ಪೆಯ ರಿಚ್ ಫೋರ್ಟ್ ಹೋಟೆಲ್ ಮಾಲೀಕ ಅಣ್ಣಪ್ಪ ಅವರು ರಾತ್ರಿ ಆಸರೆ ನೀಡಿ, ಊಟದ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮರೆದಿದ್ದಾರೆ.</p>.<p>‘ಗುವಾಹಟಿಯಿಂದ ಬೆಂಗಳೂರಿಗೆ ರೈಲು ಮೂಲಕ ಬಂದ ಕಾರ್ಮಿಕರನ್ನು ಕೊಡಗು ಜಿಲ್ಲೆಯ ಸುಂಟಿಕೊಪ್ಪ, ಸಿದ್ದಾಪುರ, ಮಡಿಕೇರಿ ಕಡೆಯ ಕಾಫಿ ತೋಟಗಳಿಗೆ ಹಾಗೂ ನೆಲ್ಲಿಹುದಿಕೇರಿಯ ಇಟ್ಟಿಗೆ ಕಾರ್ಖಾನೆಗೆ ಕಳುಹಿಸಿಕೊಡುವಂತೆ ಮಾಲೀಕರು ತಿಳಿಸಿದ್ದರು’ ಎಂದು ಮೇಸ್ತ್ರಿ ಅಳಲು ತೋಡಿಕೊಂಡಿದ್ದಾರೆ.</p>.<p>ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಕಾರ್ಮಿಕರನ್ನು ವಾಪಾಸ್ ಅವರ ಸ್ವಂತ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಆದರೂ ಕಾರ್ಮಿಕರು ಜಿಲ್ಲೆಯ ವಿವಿಧ ಗಡಿಗಳ ಮೂಲಕ ಸಿದ್ದಾಪುರ ಸುಂಟಿಕೊಪ್ಪ, ಗೋಣಿಕೊಪ್ಪ ಕಡೆಗೆ ತೆರಳಿದ್ದಾರೆ ಎನ್ನಲಾಗಿದೆ.</p>.<p>ಅಸ್ಸಾಂನ ಸುಮಾರು 20 ಕಾರ್ಮಿಕರು ಮಡಿಕೇರಿ ಸುತ್ತಮುತ್ತಲಿನ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸಲು ಮೈಸೂರು ಜಿಲ್ಲೆಯ ಕೊಪ್ಪ ಗ್ರಾಮದ ಮೂಲಕ ಗುಡ್ಡೆಹೊಸೂರು ತೆಪ್ಪದಕಂಡಿ ತೂಗು ಸೇತುವೆ ಮೂಲಕ ಬರುವುದನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.</p>.<p>ಕಾಫಿ ತೋಟಗಳ ಮಾಲೀಕರು ಕಾರ್ಮಿಕರನ್ನು ಕರೆದುಕೊಂಡು ಹೋಗಲು ಸ್ಥಳಕ್ಕೆ ಆಗಮಿಸಿದ್ದರು. ಈ ಸಂದರ್ಭ ಗ್ರಾಮಸ್ಥರು ಹಾಗೂ ಕಾಫಿ ತೋಟದ ಸಿಬ್ಬಂದಿ ನಡುವೆ ಮಾತಿನ ಚಕಮುಖಿ ನಡೆಯಿತು. ಕಾರ್ಮಿಕರನ್ನು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಯಿತು. ಕೊಡಗಿನಲ್ಲಿ ಕೋವಿಡ್ ಹತೋಟಿಗೆ ಬರುತ್ತಿಲ್ಲ. ಇಂತಹ ಸಮಯದಲ್ಲಿ ಹೊರ ರಾಜ್ಯದ ಕಾರ್ಮಿಕರು ಬರುತ್ತಿರುವುದನ್ನು ಸ್ಥಳೀಯರು ಖಂಡಿಸಿದ್ದಾರೆ.</p>.<p>ಸ್ಥಳಕ್ಕೆ ತಹಶೀಲ್ದಾರ್ ಗೋವಿಂದರಾಜ್ ಭೇಟಿ ನೀಡಿ ಎಲ್ಲ ಕಾರ್ಮಿಕರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಿ ಸೀಲ್ ಹಾಕಿ ಕಡ್ಡಾಯವಾಗಿ ತೋಟದ ಲೈನ್ ಮನೆಗಳಲ್ಲಿ ಹೋಂ ಕ್ವಾರಂಟೈನ್ ಮಾಡುವಂತೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>