ಮಡಿಕೇರಿ: ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ ಎಂಬ ನಕಲಿ ಆದೇಶಪತ್ರವನ್ನು ವಾಟ್ಸ್ಆ್ಯಪ್ಗಳಲ್ಲಿ ಹಾಕಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಪ್ರಕರಣ ದಾಖಲಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
‘ಶಾಲಾ, ಕಾಲೇಜುಗಳಿಗೆ ರಜೆ ಇಲ್ಲ. ನಕಲಿ ಆದೇಶದ ಪ್ರತಿಯನ್ನು ಹಾಕಿದವರ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ತಿಳಿಸಿದರು.
ಮಳೆಯಿಂದ ತೊಂದರೆಗೆ ಒಳಗಾಗುವ ಶಾಲೆಗಳಿಗೆ ಮಾತ್ರ ರಜೆ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಅಧಿಕಾರ ನೀಡಲಾಗಿದೆ.