ಇಂದಿರಾ ನಗರದ ವಿವೇಕಾನಂದ ಗಣೇಶೋತ್ಸವ ಸೇವಾ ಸಮಿತಿ, ಹಳೆ ತಾಲ್ಲೂಕಿನ ಪೊನ್ನು ಮುತ್ತಪ್ಪ ವಿನಾಯಕ ಸೇವಾ ಸಮಿತಿ, ಪಟ್ಟಣದ ರಾಮಮಂದಿರ ದೇವಸ್ಥಾನ ಸಮಿತಿ, ಹಳೆ ತಾಲ್ಲೂಕು ಭಗವತಿ ದೇವಸ್ಥಾನದ ಗಣೇಶೋತ್ಸವ ಸಮಿತಿ ಹಾಗೂ ಕಕ್ಕುಂದ ಕಾಡು ವೆಂಕಟೇಶ್ವರ ದೇವಸ್ಥಾನದ ಗಣೇಶ ವಿಗ್ರಹಗಳ ವಿಸರ್ಜನಾ ಕಾರ್ಯಕ್ರಮ ಶನಿವಾರ ಪಟ್ಟಣದಲ್ಲಿ ಸಾಗಿ ಮೂರ್ತಿಗಳನ್ನು ಕಾರೆಕಾಡು ಬಳಿಯ ಕಾವೇರಿ ಹೊಳೆ ಸೇತುವೆ ಬಳಿ ವಿಸರ್ಜನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಹಳೆ ತಾಲ್ಲೂಕಿನಿಂದ ಮಾರುಕಟ್ಟೆಯವರೆಗೆ, ನಾಪೋಕ್ಲು ಬಸ್ ನಿಲ್ದಾಣದಿಂದ ಬೇತು ರಸ್ತೆಯ ಮಕ್ಕಿ ದೇವಸ್ಥಾನದ ಕಮಾನುಗೇಟ್ ವರೆಗೆ ರಸ್ತೆಯ ಎರಡು ಬದಿಗಳಲ್ಲಿ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಲುಗಡೆ ಮಾಡಬಾರದು ಎಂದು ತಿಳಿಸಿದ್ದಾರೆ.