ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ಇಲ್ಲ: ಕೆ.ರಘುಪತಿ ಭಟ್‌

Published 24 ಮೇ 2024, 6:50 IST
Last Updated 24 ಮೇ 2024, 6:50 IST
ಅಕ್ಷರ ಗಾತ್ರ

ಮಡಿಕೇರಿ: 'ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದವರಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪುತ್ತಿದೆ ಎಂಬ ಭಾವನೆ ಬಲವಾಗುತ್ತಿದೆ' ಎಂದು ನೈರುತ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ರಘುಪತಿ ಭಟ್‌ ಹೇಳಿದರು.

'ನನಗೆ ಪಕ್ಷದಿಂದ ಯಾವುದೇ ನೋಟಿಸ್ ಬಂದಿಲ್ಲ. ಬಂದರೆ ವಿವರವಾದ ಉತ್ತರ ಕೊಡುವೆ. ಮಾತ್ರವಲ್ಲ,‌‌‌ ಪಕ್ಷದ ಶಿಸ್ತು ಸಮಿತಿ ವಿಚಾರಣೆಗೆ ಕರೆದರೆ ಹಾಜರಾಗಿ ವಿವರಣೆ ಕೊಡುವೆ' ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

'ನನಗೆ ಏಕೆ ಎರಡು ಬಾರಿ ಟಿಕೆಟ್ ಕೊಡಲಿಲ್ಲ ಎಂಬುದು ಗೊತ್ತಿಲ್ಲ. ಯಾರು ಟಿಕೆಟ್ ತಪ್ಪಿಸಿದರು ಎಂಬುದೂ ಗೊತ್ತಿಲ್ಲ. ಆದರೆ ಯಾರೊ ನಾಯಕರು ತಪ್ಪಿಸಿದಂತೂ ಹೌದು' ಎಂದರು.

'ಹಿಜಾಬ್ ವಿಷಯವನ್ನು ನಾನು ಸೃಷ್ಟಿ ಮಾಡಿದ್ದಲ್ಲ. ಕೆಲವು ಹೆಣ್ಣು ಮಕ್ಕಳನ್ನು ಕೆಲವೊಂದು ಸಂಘಟನೆಗಳು ದಾರಿ ತಪ್ಪಿಸಿದರು. ನಾನು ಮುಸ್ಲಿಮರು ಮತ್ತು ಕ್ರೈಸ್ತರ ವಿರೋಧಿ ಅಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT