‘ಲಿಂಗಾಯತರಿಗೇ ಟಿಕೆಟ್ ಕೊಡಬೇಕೆನ್ನುವುದಾಗಿದ್ದರೆ, ಶಿವಮೊಗ್ಗದಲ್ಲಿ 35 ವರ್ಷಗಳ ಕಾಲ ಬಿಜೆಪಿ ಕಾರ್ಯಕರ್ತರಾಗಿರುವ ಗಿರೀಶ ಪಟೇಲ್ ಅವರಿಗೆ ಅಥವಾ ಬೇರೆ ಹಿರಿಯ ಕಾರ್ಯಕರ್ತರಿಗೆ ನೀಡಿದ್ದರೆ ನನಗೆ ಸಮಾಧಾನವಾಗುತ್ತಿತ್ತು. ಆದರೆ, ಹಿಂದೆ ಪಕ್ಷದ ವಿರುದ್ಧವೇ ಇದ್ದು, ಈಗಷ್ಟೇ ಸೇರ್ಪಡೆಯಾದವರಿಗೆ ಟಿಕೆಟ್ ನೀಡಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.