<p><strong>ಮಡಿಕೇರಿ</strong>: ದಕ್ಷಿಣ ಭಾರತದ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕಾವೇರಿಯ ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬೇಡಿ ಎಂದು ಪೊಲೀಸರು ಮತ್ತು ಭಗಂಡೇಶ್ವರ ದೇವಾಲಯ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು.</p>.<p>ಭಾಗಮಂಡಲ ಮೇಲ್ಸೇತುವೆ ವೀಕ್ಷಣೆಯ ವೇಳೆ ತ್ರಿವೇಣಿ ಸಂಗಮದಲ್ಲಿ ಈಜಾಡುತ್ತಿದ್ದ ಪ್ರವಾಸಿಗರನ್ನು ಕಂಡು ಸಿಡಿಮಿಡಿಗೊಂಡ ಅವರು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ತ್ರಿವೇಣಿ ಸಂಗಮದಲ್ಲಿ ಜಲಕ್ರಿಡೆ ನಡೆಸುತ್ತಿದ್ದ ಪ್ರವಾಸಿಗರಿಗೆ ಕ್ಷೇತ್ರದ ಪಾವಿತ್ರ್ಯತೆ ಬಗ್ಗೆ ತಿಳಿಸಿ ಮನವರಿಕೆ ಮಾಡಿದರು.</p>.<p>ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿಯಲ್ಲಿ ವಾತಾವರಣ ನಿರ್ಮಾಣವಾಗಬಾರದು ಎಂದರು.</p>.<p>ಸಿಬ್ಬಂದಿ ಕಾವಲು ಕಾಯುವಂತೆ ನಿರ್ದೇಶನ ನೀಡಿದ ಪೊನ್ನಣ್ಣ ಅವರು, ಹೆಚ್ಚಿನ ಸಿಬ್ಬಂದಿ ಅವಶ್ಯಕತೆ ಇದ್ದರೆ ಒದಗಿಸುವುದಾಗಿ ತಿಳಿಸಿದರು.</p>.<p>ಪ್ರವಾಸಿಗರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಲು ತಿಳಿವಳಿಕೆ ಫಲಕ ಅಳವಡಿಸುವಂತೆ ಸಬ್ ಇನ್ಸ್ಪೆಕ್ಟರ್ ಅವರಿಗೆ ಸೂಚನೆ ನೀಡಿದರು.</p>.<p>ನಂತರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಭಾಗಮಂಡಲ ಮತ್ತು ತಲಕಾವೇರಿ ಪೌರಾಣಿಕ ಹಿನ್ನೆಲೆಯುಳ್ಳ ಪುಣ್ಯ ಕ್ಷೇತ್ರವಾಗಿದ್ದು, ಇಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ವಿರುದ್ದವಾಗಿ ಯಾವುದೇ ನಡವಳಿಕೆ ಸಹಿಸಲು ಸಾಧ್ಯವಿಲ್ಲ’ ಎಂದರು.</p>.<p>ಮಾಹಿತಿ ಕೊರತೆಯಿಂದ ಕೆಲ ಪ್ರವಾಸಿಗರಿಂದ ಅಪಚಾರವಾಗುತ್ತಿರುವ ಸಂಗತಿ ಗಮನಕ್ಕೆ ಬಂದಿದ್ದು, ಇದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>ಈ ವೇಳೆ ಮುಖಂಡರಾದ ತೆನ್ನಿರಮೈನಾ, ರಮಾನಾಥ್, ಸೂರಜ್ ಹೊಸೂರು, ಸುನಿಲ್ ಪತ್ರಾವೋ, ನೆರವಂಡ ಉಮೇಶ್, ದೇವಂಗೋಡಿ ಹರ್ಷ, ಕುದುಪಜೆ ಪ್ರಕಾಶ್ ಭಾಗವಹಿಸಿದ್ದರು.</p>.<p>ಜಲಕ್ರೀಡೆ ನಡೆಸುತ್ತಿದ್ದವರಿಗೆ ಪಾಠ ಹೇಳಿದ ಶಾಸಕ ಧಾರ್ಮಿಕ ವಿಧಿವಿಧಾನಗಳಿಗೆ ವಿರುದ್ದವಾಗಿ ನಡೆಯದಂತೆ ಸೂಚನೆ ಮುಂದೆ ಇನ್ನಷ್ಟು ನಿಗಾ ವಹಿಸಲು ಸಿಬ್ಬಂದಿಗೆ ನಿರ್ದೇಶನ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ದಕ್ಷಿಣ ಭಾರತದ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕಾವೇರಿಯ ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬೇಡಿ ಎಂದು ಪೊಲೀಸರು ಮತ್ತು ಭಗಂಡೇಶ್ವರ ದೇವಾಲಯ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು.</p>.<p>ಭಾಗಮಂಡಲ ಮೇಲ್ಸೇತುವೆ ವೀಕ್ಷಣೆಯ ವೇಳೆ ತ್ರಿವೇಣಿ ಸಂಗಮದಲ್ಲಿ ಈಜಾಡುತ್ತಿದ್ದ ಪ್ರವಾಸಿಗರನ್ನು ಕಂಡು ಸಿಡಿಮಿಡಿಗೊಂಡ ಅವರು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ತ್ರಿವೇಣಿ ಸಂಗಮದಲ್ಲಿ ಜಲಕ್ರಿಡೆ ನಡೆಸುತ್ತಿದ್ದ ಪ್ರವಾಸಿಗರಿಗೆ ಕ್ಷೇತ್ರದ ಪಾವಿತ್ರ್ಯತೆ ಬಗ್ಗೆ ತಿಳಿಸಿ ಮನವರಿಕೆ ಮಾಡಿದರು.</p>.<p>ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿಯಲ್ಲಿ ವಾತಾವರಣ ನಿರ್ಮಾಣವಾಗಬಾರದು ಎಂದರು.</p>.<p>ಸಿಬ್ಬಂದಿ ಕಾವಲು ಕಾಯುವಂತೆ ನಿರ್ದೇಶನ ನೀಡಿದ ಪೊನ್ನಣ್ಣ ಅವರು, ಹೆಚ್ಚಿನ ಸಿಬ್ಬಂದಿ ಅವಶ್ಯಕತೆ ಇದ್ದರೆ ಒದಗಿಸುವುದಾಗಿ ತಿಳಿಸಿದರು.</p>.<p>ಪ್ರವಾಸಿಗರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಲು ತಿಳಿವಳಿಕೆ ಫಲಕ ಅಳವಡಿಸುವಂತೆ ಸಬ್ ಇನ್ಸ್ಪೆಕ್ಟರ್ ಅವರಿಗೆ ಸೂಚನೆ ನೀಡಿದರು.</p>.<p>ನಂತರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಭಾಗಮಂಡಲ ಮತ್ತು ತಲಕಾವೇರಿ ಪೌರಾಣಿಕ ಹಿನ್ನೆಲೆಯುಳ್ಳ ಪುಣ್ಯ ಕ್ಷೇತ್ರವಾಗಿದ್ದು, ಇಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ವಿರುದ್ದವಾಗಿ ಯಾವುದೇ ನಡವಳಿಕೆ ಸಹಿಸಲು ಸಾಧ್ಯವಿಲ್ಲ’ ಎಂದರು.</p>.<p>ಮಾಹಿತಿ ಕೊರತೆಯಿಂದ ಕೆಲ ಪ್ರವಾಸಿಗರಿಂದ ಅಪಚಾರವಾಗುತ್ತಿರುವ ಸಂಗತಿ ಗಮನಕ್ಕೆ ಬಂದಿದ್ದು, ಇದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>ಈ ವೇಳೆ ಮುಖಂಡರಾದ ತೆನ್ನಿರಮೈನಾ, ರಮಾನಾಥ್, ಸೂರಜ್ ಹೊಸೂರು, ಸುನಿಲ್ ಪತ್ರಾವೋ, ನೆರವಂಡ ಉಮೇಶ್, ದೇವಂಗೋಡಿ ಹರ್ಷ, ಕುದುಪಜೆ ಪ್ರಕಾಶ್ ಭಾಗವಹಿಸಿದ್ದರು.</p>.<p>ಜಲಕ್ರೀಡೆ ನಡೆಸುತ್ತಿದ್ದವರಿಗೆ ಪಾಠ ಹೇಳಿದ ಶಾಸಕ ಧಾರ್ಮಿಕ ವಿಧಿವಿಧಾನಗಳಿಗೆ ವಿರುದ್ದವಾಗಿ ನಡೆಯದಂತೆ ಸೂಚನೆ ಮುಂದೆ ಇನ್ನಷ್ಟು ನಿಗಾ ವಹಿಸಲು ಸಿಬ್ಬಂದಿಗೆ ನಿರ್ದೇಶನ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>