<p><strong>ಸೋಮವಾರಪೇಟೆ</strong>: ಸಮೀಪದ ಶಾಂತಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ.</p>.<p>ಗುರುವಾರ ಸಂಜೆ ಗುಡುಗು ಸಹಿತ ಮಳೆಯಾಗುತ್ತಿದ್ದ ಸಂದರ್ಭ ಶಾಂತಳ್ಳಿ ನಿವಾಸಿ ಬಿ.ಡಿ. ಕಾಳಪ್ಪ ಅವರ ಮನೆ ಪಕ್ಕದ ಬಳಂಜಿ ಮರಕ್ಕೆ ಸಿಡಿಲು ಬಡಿದಿದೆ. ಪರಿಣಾಮ ಮರ ತುಂಡಾಗಿ ಪಕ್ಕದಲ್ಲೇ ಇದ್ದ ಮನೆಯ ಮೇಲೆ ಬಿದ್ದಿದೆ.</p>.<p>ಮರ ಬೀಳುತ್ತಿದ್ದಂತೆ ಮನೆಯೊಳಗಿದ್ದ ಕಾಳಪ್ಪ ಮತ್ತು ಪತ್ನಿ ರತ್ನಾ ಅವರು ಅಡುಗೆ ಮನೆಗೆ ಓಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಮನೆಯ ಚಾವಣಿ, ಹೆಂಚುಗಳು, ಗೋಡೆಗಳಿಗೆ ಹಾನಿಯಾಗಿದ್ದು, ಸ್ಥಳಕ್ಕೆ ಗ್ರಾಮ ಲೆಕ್ಕಿಗ ಕರಿಬಸವಯ್ಯ ಹಾಗೂ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ.</p>.<p class="Briefhead"><strong>ಕೆರೆಗಳಿಗೆ ನೀರು</strong></p>.<p><strong>ನಾಪೋಕ್ಲು: </strong>ನಾಪೋಕ್ಲು ವ್ಯಾಪ್ತಿಯ ಕೈಕಾಡು, ಕಕ್ಕಬ್ಬೆ ಹಾಗೂ ಕುಂಜಿಲ ಭಾಗಗಳಲ್ಲಿ ಶುಕ್ರವಾರ ಮಧ್ಯಾಹ್ನ ಉತ್ತಮ ಮಳೆ ಸುರಿಯಿತು.</p>.<p>ಈ ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕೆರೆಗಳು ಭರ್ತಿಯಾಗಿವೆ, ತೋಡುಗಳು ತುಂಬಿ ಹರಿಯುತ್ತಿವೆ.</p>.<p>ಮಾರ್ಚ್ ತಿಂಗಳಲ್ಲಿ ಕಾಫಿ ತೋಟಗಳಿಗೆ ನೀರು ಹಾಯಿಸಿದ್ದರಿಂದ ಬಹುತೇಕ ಕೆರೆಗಳು ಖಾಲಿಯಾಗಿದ್ದವು. ಈಗ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ ಎಂದು ಬೇತು ಗ್ರಾಮದ ಬೆಳೆಗಾರ ನಾರಾಯಣ ಪ್ರತಿಕ್ರಿಯಿಸಿದರು.</p>.<p>ಕೃಷಿ ಹೊಂಡಗಳಲ್ಲೂ ನೀರು ತುಂಬಿದ್ದು, ಸುತ್ತಲ ಪರಿಸರ ಹಸಿರಿನಿಂದ ಕಂಗೊಳಿಸುತ್ತಿವೆ.</p>.<p class="Briefhead"><strong>ಸಾಧಾರಣ ಮಳೆ</strong></p>.<p><strong>ವಿರಾಜಪೇಟೆ: </strong>ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಕೆಲಕಾಲ ಸಾಧಾರಣ ಮಳೆ ಸುರಿಯಿತು.</p>.<p>ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾರವರಣವಿತ್ತು, ಮಧ್ಯಾಹ್ನ 3 ರ ಸುಮಾರಿಗೆ ಕೆಲಕಾಲ ಮಳೆ<br />ಸುರಿಯಿತು.</p>.<p>ರಾತ್ರಿಯೂ ಗುಡುಗು ಸಹಿತ ಉತ್ತಮ ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಸಮೀಪದ ಶಾಂತಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ.</p>.<p>ಗುರುವಾರ ಸಂಜೆ ಗುಡುಗು ಸಹಿತ ಮಳೆಯಾಗುತ್ತಿದ್ದ ಸಂದರ್ಭ ಶಾಂತಳ್ಳಿ ನಿವಾಸಿ ಬಿ.ಡಿ. ಕಾಳಪ್ಪ ಅವರ ಮನೆ ಪಕ್ಕದ ಬಳಂಜಿ ಮರಕ್ಕೆ ಸಿಡಿಲು ಬಡಿದಿದೆ. ಪರಿಣಾಮ ಮರ ತುಂಡಾಗಿ ಪಕ್ಕದಲ್ಲೇ ಇದ್ದ ಮನೆಯ ಮೇಲೆ ಬಿದ್ದಿದೆ.</p>.<p>ಮರ ಬೀಳುತ್ತಿದ್ದಂತೆ ಮನೆಯೊಳಗಿದ್ದ ಕಾಳಪ್ಪ ಮತ್ತು ಪತ್ನಿ ರತ್ನಾ ಅವರು ಅಡುಗೆ ಮನೆಗೆ ಓಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಮನೆಯ ಚಾವಣಿ, ಹೆಂಚುಗಳು, ಗೋಡೆಗಳಿಗೆ ಹಾನಿಯಾಗಿದ್ದು, ಸ್ಥಳಕ್ಕೆ ಗ್ರಾಮ ಲೆಕ್ಕಿಗ ಕರಿಬಸವಯ್ಯ ಹಾಗೂ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ.</p>.<p class="Briefhead"><strong>ಕೆರೆಗಳಿಗೆ ನೀರು</strong></p>.<p><strong>ನಾಪೋಕ್ಲು: </strong>ನಾಪೋಕ್ಲು ವ್ಯಾಪ್ತಿಯ ಕೈಕಾಡು, ಕಕ್ಕಬ್ಬೆ ಹಾಗೂ ಕುಂಜಿಲ ಭಾಗಗಳಲ್ಲಿ ಶುಕ್ರವಾರ ಮಧ್ಯಾಹ್ನ ಉತ್ತಮ ಮಳೆ ಸುರಿಯಿತು.</p>.<p>ಈ ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕೆರೆಗಳು ಭರ್ತಿಯಾಗಿವೆ, ತೋಡುಗಳು ತುಂಬಿ ಹರಿಯುತ್ತಿವೆ.</p>.<p>ಮಾರ್ಚ್ ತಿಂಗಳಲ್ಲಿ ಕಾಫಿ ತೋಟಗಳಿಗೆ ನೀರು ಹಾಯಿಸಿದ್ದರಿಂದ ಬಹುತೇಕ ಕೆರೆಗಳು ಖಾಲಿಯಾಗಿದ್ದವು. ಈಗ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ ಎಂದು ಬೇತು ಗ್ರಾಮದ ಬೆಳೆಗಾರ ನಾರಾಯಣ ಪ್ರತಿಕ್ರಿಯಿಸಿದರು.</p>.<p>ಕೃಷಿ ಹೊಂಡಗಳಲ್ಲೂ ನೀರು ತುಂಬಿದ್ದು, ಸುತ್ತಲ ಪರಿಸರ ಹಸಿರಿನಿಂದ ಕಂಗೊಳಿಸುತ್ತಿವೆ.</p>.<p class="Briefhead"><strong>ಸಾಧಾರಣ ಮಳೆ</strong></p>.<p><strong>ವಿರಾಜಪೇಟೆ: </strong>ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಕೆಲಕಾಲ ಸಾಧಾರಣ ಮಳೆ ಸುರಿಯಿತು.</p>.<p>ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾರವರಣವಿತ್ತು, ಮಧ್ಯಾಹ್ನ 3 ರ ಸುಮಾರಿಗೆ ಕೆಲಕಾಲ ಮಳೆ<br />ಸುರಿಯಿತು.</p>.<p>ರಾತ್ರಿಯೂ ಗುಡುಗು ಸಹಿತ ಉತ್ತಮ ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>