<p><strong>ಮಡಿಕೇರಿ: </strong>‘ಮುಸಲ್ಮಾನರು ತಮ್ಮ ಪ್ರಾಣ ತ್ಯಾಗ ಮಾಡಬಹುದು. ಆದರೆ, ರಾಷ್ಟ್ರ ತ್ಯಾಗ ಮಾಡಲು ಸಿದ್ಧರಿಲ್ಲ’ ಎಂದು ಎಂದು ಬೆಂಗಳೂರು ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ.ಹ್ಯಾರೀಸ್ ಅಭಿಪ್ರಾಯಪಟ್ಟರು.</p>.<p>ರಾಜ್ಯ ಫೈಝೀಸ್ ಅಸೋಸಿಯೇಷನ್ ವತಿಯಿಂದ ಇಲ್ಲಿನ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ‘ಸಮಸ್ತ ಮಹಾಸಮ್ಮೇಳನ’ದಲ್ಲಿ ಅವರು ಮಾತನಾಡಿದರು.</p>.<p>‘ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯು ದೇಶದ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ನಾವು ಈ ದೇಶಕ್ಕೆ ನಿನ್ನೆ–ಮೊನ್ನೆ ಬಂದವರಲ್ಲ. ದೇಶದ ಹಕ್ಕನ್ನು ನಾವು ಕಾಪಾಡಿಕೊಂಡು ಬಂದವರು’ ಎಂದು ಹ್ಯಾರೀಸ್ ನುಡಿದರು.</p>.<p>‘ಈ ದೇಶದಲ್ಲೇ ನಾವೂ ಜೀವನ ಜನಿಸಿದ್ದೇವೆ. ಯಾರಿಂದಲೂ ನಮ್ಮನ್ನು ಇಲ್ಲಿಂದ ಹೊರಹಾಕಲು ಸಾಧ್ಯವಿಲ್ಲ. ಯಾರಿಗೆ ಬೇಕಾದರೂ ನಾಗರಿಕತೆ ಕೊಟ್ಟರೂ ಪರವಾಗಿಲ್ಲ. ಆದರೆ, ನಮ್ಮನ್ನು ಹೊರಗಿಡುವ ಪ್ರಯತ್ನ ಸರಿಯಲ್ಲ. ಹೊರ ಹಾಕುವುದಿದ್ದರೆ ಎಲ್ಲರನ್ನೂ ಹೊರಹಾಕಲಿ’ ಎಂದು ಕೇಂದ್ರಕ್ಕೆ ಎಚ್ಚರಿಸಿದರು.</p>.<p>‘ಪ್ರತಿಯೊಬ್ಬರನ್ನೂ ಜೊತೆಯಲ್ಲಿ ಕರೆದೊಯ್ಯುವ ಸಂಸ್ಕಾರ ನಮ್ಮ ಹಿರಿಯರು ನಮಗೆ ಕಲಿಸಿಕೊಟ್ಟಿದ್ದಾರೆ. ಅದನ್ನೇ ನಾವೆಲ್ಲರೂ ಪಾಲಿಸುತ್ತಿದ್ದೆವೆ’ ಎಂದು ಹೇಳಿದರು.</p>.<p>‘ಸಂಖ್ಯಾಬಲದ ಆಧಾರದ ಮೇಲೆ ಸಂವಿಧಾನವನ್ನು ಬದಲಾಯಿಸಲು ಕೆಲವು ನಾಯಕರು ಮುಂದಾಗಿದ್ದಾರೆ. ನಿಮ್ಮ ಯಾವುದೇ ಷಡ್ಯಂತ್ರಕ್ಕೆ ನಾವು ಬಲಿಯಾಗುವುದಿಲ್ಲ. ದೇಶ ವಿರೋಧಿಗಳನ್ನು ನಾವು ಕಠೋರವಾಗಿ ವಿರೋಧ ಮಾಡುತ್ತೇವೆ’ ಎಂದು ಹೇಳಿದರು.</p>.<p>ಎಸ್ಕೆಎಸ್ಎಸ್ಎಫ್ಎಫ್ ರಾಜ್ಯ ಘಟಕದ ಅಧ್ಯಕ್ಷ ಅನೀಸ್ ಕೌಸರಿ ಮಾತನಾಡಿ, ‘60ನೇ ವಾರ್ಷಿಕ ಮಹಾಸಮ್ಮೇಳನವು ಇದೇ 27ರಿಂದ 29ರ ವರೆಗೆ ಕೇರಳದಲ್ಲಿ ನಡೆಯಲಿದೆ. ಅದರ ಪ್ರಚಾರಾರ್ಥವಾಗಿ ಈ ಮಹಾಸಮ್ಮೇಳನವನ್ನು ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದು ಸದ್ಯ ಯಶಸ್ವಿಯಾಗಿದೆ. ಮಂಗಳೂರು, ಉಡುಪಿ, ಹಾಸನ, ಚಿಕ್ಕಮಗಳೂರಿನಿಂದ ಜನರು ಸಮಾವೇಶಕ್ಕೆ ಬಂದಿರುವುದು ಸಂತೋಷ ತಂದಿದೆ’ ಎಂದರು.</p>.<p>ಸಮಸ್ತದ ಅಧೀನದಲ್ಲಿ 10 ಸಾವಿರಕ್ಕೂ ಹೆಚ್ಚು ಮದರಸಗಳು ಕಾರ್ಯ ನಿರ್ವಹಿಸುತ್ತಾ ಬಂದಿದೆ. ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿದಾಗ ನಮ್ಮ ತಂಡವು ಎಲ್ಲ ಸಮುದಾಯದ ಜನರಿಗೂ ನೆರವು ನೀಡಿದೆ ಎಂದು ಮಾಹಿತಿ ನೀಡಿದರು.</p>.<p>ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಎ.ಯಾಕೂಬ್ ಧ್ವಜಾರೋಹಣದ ಮೂಲಕ ಚಾಲನೆ ನೀಡಿದರು. ಓಣಂಬಳ್ಳಿ ಮುಹಮ್ಮದ್ ಫೈಝಿ, ಅಬ್ದುಲ್ಲಾ ಫೈಝಿ ಕೊಡಗು, ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್, ಉಸ್ಮಾನ್ ಹಾಜಿ ಸಿದ್ದಾಪುರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>‘ಮುಸಲ್ಮಾನರು ತಮ್ಮ ಪ್ರಾಣ ತ್ಯಾಗ ಮಾಡಬಹುದು. ಆದರೆ, ರಾಷ್ಟ್ರ ತ್ಯಾಗ ಮಾಡಲು ಸಿದ್ಧರಿಲ್ಲ’ ಎಂದು ಎಂದು ಬೆಂಗಳೂರು ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ.ಹ್ಯಾರೀಸ್ ಅಭಿಪ್ರಾಯಪಟ್ಟರು.</p>.<p>ರಾಜ್ಯ ಫೈಝೀಸ್ ಅಸೋಸಿಯೇಷನ್ ವತಿಯಿಂದ ಇಲ್ಲಿನ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ‘ಸಮಸ್ತ ಮಹಾಸಮ್ಮೇಳನ’ದಲ್ಲಿ ಅವರು ಮಾತನಾಡಿದರು.</p>.<p>‘ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯು ದೇಶದ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ನಾವು ಈ ದೇಶಕ್ಕೆ ನಿನ್ನೆ–ಮೊನ್ನೆ ಬಂದವರಲ್ಲ. ದೇಶದ ಹಕ್ಕನ್ನು ನಾವು ಕಾಪಾಡಿಕೊಂಡು ಬಂದವರು’ ಎಂದು ಹ್ಯಾರೀಸ್ ನುಡಿದರು.</p>.<p>‘ಈ ದೇಶದಲ್ಲೇ ನಾವೂ ಜೀವನ ಜನಿಸಿದ್ದೇವೆ. ಯಾರಿಂದಲೂ ನಮ್ಮನ್ನು ಇಲ್ಲಿಂದ ಹೊರಹಾಕಲು ಸಾಧ್ಯವಿಲ್ಲ. ಯಾರಿಗೆ ಬೇಕಾದರೂ ನಾಗರಿಕತೆ ಕೊಟ್ಟರೂ ಪರವಾಗಿಲ್ಲ. ಆದರೆ, ನಮ್ಮನ್ನು ಹೊರಗಿಡುವ ಪ್ರಯತ್ನ ಸರಿಯಲ್ಲ. ಹೊರ ಹಾಕುವುದಿದ್ದರೆ ಎಲ್ಲರನ್ನೂ ಹೊರಹಾಕಲಿ’ ಎಂದು ಕೇಂದ್ರಕ್ಕೆ ಎಚ್ಚರಿಸಿದರು.</p>.<p>‘ಪ್ರತಿಯೊಬ್ಬರನ್ನೂ ಜೊತೆಯಲ್ಲಿ ಕರೆದೊಯ್ಯುವ ಸಂಸ್ಕಾರ ನಮ್ಮ ಹಿರಿಯರು ನಮಗೆ ಕಲಿಸಿಕೊಟ್ಟಿದ್ದಾರೆ. ಅದನ್ನೇ ನಾವೆಲ್ಲರೂ ಪಾಲಿಸುತ್ತಿದ್ದೆವೆ’ ಎಂದು ಹೇಳಿದರು.</p>.<p>‘ಸಂಖ್ಯಾಬಲದ ಆಧಾರದ ಮೇಲೆ ಸಂವಿಧಾನವನ್ನು ಬದಲಾಯಿಸಲು ಕೆಲವು ನಾಯಕರು ಮುಂದಾಗಿದ್ದಾರೆ. ನಿಮ್ಮ ಯಾವುದೇ ಷಡ್ಯಂತ್ರಕ್ಕೆ ನಾವು ಬಲಿಯಾಗುವುದಿಲ್ಲ. ದೇಶ ವಿರೋಧಿಗಳನ್ನು ನಾವು ಕಠೋರವಾಗಿ ವಿರೋಧ ಮಾಡುತ್ತೇವೆ’ ಎಂದು ಹೇಳಿದರು.</p>.<p>ಎಸ್ಕೆಎಸ್ಎಸ್ಎಫ್ಎಫ್ ರಾಜ್ಯ ಘಟಕದ ಅಧ್ಯಕ್ಷ ಅನೀಸ್ ಕೌಸರಿ ಮಾತನಾಡಿ, ‘60ನೇ ವಾರ್ಷಿಕ ಮಹಾಸಮ್ಮೇಳನವು ಇದೇ 27ರಿಂದ 29ರ ವರೆಗೆ ಕೇರಳದಲ್ಲಿ ನಡೆಯಲಿದೆ. ಅದರ ಪ್ರಚಾರಾರ್ಥವಾಗಿ ಈ ಮಹಾಸಮ್ಮೇಳನವನ್ನು ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದು ಸದ್ಯ ಯಶಸ್ವಿಯಾಗಿದೆ. ಮಂಗಳೂರು, ಉಡುಪಿ, ಹಾಸನ, ಚಿಕ್ಕಮಗಳೂರಿನಿಂದ ಜನರು ಸಮಾವೇಶಕ್ಕೆ ಬಂದಿರುವುದು ಸಂತೋಷ ತಂದಿದೆ’ ಎಂದರು.</p>.<p>ಸಮಸ್ತದ ಅಧೀನದಲ್ಲಿ 10 ಸಾವಿರಕ್ಕೂ ಹೆಚ್ಚು ಮದರಸಗಳು ಕಾರ್ಯ ನಿರ್ವಹಿಸುತ್ತಾ ಬಂದಿದೆ. ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿದಾಗ ನಮ್ಮ ತಂಡವು ಎಲ್ಲ ಸಮುದಾಯದ ಜನರಿಗೂ ನೆರವು ನೀಡಿದೆ ಎಂದು ಮಾಹಿತಿ ನೀಡಿದರು.</p>.<p>ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಎ.ಯಾಕೂಬ್ ಧ್ವಜಾರೋಹಣದ ಮೂಲಕ ಚಾಲನೆ ನೀಡಿದರು. ಓಣಂಬಳ್ಳಿ ಮುಹಮ್ಮದ್ ಫೈಝಿ, ಅಬ್ದುಲ್ಲಾ ಫೈಝಿ ಕೊಡಗು, ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್, ಉಸ್ಮಾನ್ ಹಾಜಿ ಸಿದ್ದಾಪುರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>