ಈ ಕುರಿತು ‘ಪ್ರಜಾವಾಣಿ’ ಕೆ.ಎಂ.ಗಣೇಶ್ ಅವರನ್ನು ಸಂಪರ್ಕಿಸಿದಾಗ, ‘ನೋಟಿಸ್ ನೀಡಿರುವುದು ನಿಜ. ವರಿಷ್ಠರು ನಾಪಂಡ ಮುತ್ತಪ್ಪ ಅವರನ್ನೇ ಅಭ್ಯರ್ಥಿ ಎಂದು ಘೋಷಿಸಿದರೆ ನಮ್ಮ ಆಕ್ಷೇಪ ಇಲ್ಲ. ಆದರೆ, ಅವರು ಘೋಷಿಸುವುದಕ್ಕೂ ಮೊದಲೇ, ಎಚ್.ಡಿ.ಕುಮಾರಸ್ವಾಮಿ ಪಂಚರತ್ನ ಯಾತ್ರೆ ಆರಂಭಿಸುವುದಕ್ಕೂ ಮುನ್ನವೇ ಅದನ್ನು ನಡೆಸುವುದು ಸರಿಯಲ್ಲ. ಹೀಗಾಗಿ, ನೋಟಿಸ್ ನೀಡಲಾಗಿದೆ. ನಾನು ಆಕಾಂಕ್ಷಿಯಂತೂ ಅಲ್ಲ’ ಎಂದು ಹೇಳಿದರು.