<p><strong>ಕುಶಾಲನಗರ:</strong> ಪಟ್ಟಣದ ಒಂದನೇ ಬ್ಲಾಕ್ ದಂಡಿನಪೇಟೆ ಬಡಾವಣೆಯ ಶಿಥಿಲಾವಸ್ಥೆಯ ಹಂಚಿನ ಕಟ್ಟಡದಲ್ಲಿ ವಾಸವಾಗಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳಿ ಆ ಕಟ್ಟಡವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ನಾಲ್ವರು ಮಾಲೀಕರಿಗೆ ಸೂಚನೆ ನೀಡಿದ್ದಾರೆ.</p>.<p>ಗೋಣಿಕೊಪ್ಪದಲ್ಲಿ ಹಳೆಯ ಕಟ್ಟಡ ಧರೆಗೆ ಉರುಳಿದ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಹಳೆಯ ಕಟ್ಟಡ ತೆರವಿಗೆ ಕ್ರಮ ಕೈಗೊಂಡಿದೆ.</p>.<p>ಪ್ರಸಕ್ತ ಮಳೆಗಾಲ ಆರಂಭವಾಗಿರುವುದರಿಂದ ಯಾವುದೇ ಸಮಯದಲ್ಲಿ ಬೀಳುವ ಹಂತದಲ್ಲಿದ್ದು, ಕೂಡಲೇ ಕಟ್ಟಡ ತೆರವುಗೊಳಿಸಬೇಕು ಎಂದು ಮಾಲೀಕರಾದ ವೆಳ್ಳಾಪುರ ಸಂಘದ ಅಧ್ಯಕ್ಷ ಎಂ.ಜಿ. ಮಹಮ್ಮದ್ ಖಾಸಿಂ, ಎಂ.ಜಿ. ಅಹ್ಮದ್ ಹುಸೇನ್, ಎಂ.ಜಿ. ಫಜಲುಲ್ ರೆಹಮಾನ್ ಅವರಿಗೆ ಪುರಸಭೆ ಮುಖ್ಯಾಧಿಕಾರಿಗಳು ನೋಟಿಸ್ ನೀಡಿದ್ದಾರೆ.</p>.<p>ಈ ಕಟ್ಟಡದಲ್ಲಿ ಕೆಲವರು ವಾಸವಾಗಿದ್ದು, ಪ್ರಾಣ ಹಾನಿಯಾಗುವ ಸಂಭವವಿರುವುದರಿಂದ ಈ ನೋಟಿಸ್ ತಲುಪಿದ ತಕ್ಷಣ ಕಟ್ಟಡದಲ್ಲಿ ವಾಸವಾಗಿರುವ ಜನರನ್ನು ಖುಲ್ಲಾಪಡಿಸಿ ಕಟ್ಟಡವನ್ನು ತೆರವುಗೊಳಿಸಬೇಕು. ತಪ್ಪಿದಲ್ಲಿ ಮುಂದೆ ಸಂಭವಿಸುವ ಪ್ರಾಣಹಾನಿ ಹಾಗೂ ಕಷ್ಟ ನಷ್ಟಗಳಿಗೆ ನಿಮ್ಮನ್ನೇ ನೇರ ಹೊಣೆಯಾನ್ನಾಗಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಪಟ್ಟಣದ ಒಂದನೇ ಬ್ಲಾಕ್ ದಂಡಿನಪೇಟೆ ಬಡಾವಣೆಯ ಶಿಥಿಲಾವಸ್ಥೆಯ ಹಂಚಿನ ಕಟ್ಟಡದಲ್ಲಿ ವಾಸವಾಗಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳಿ ಆ ಕಟ್ಟಡವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ನಾಲ್ವರು ಮಾಲೀಕರಿಗೆ ಸೂಚನೆ ನೀಡಿದ್ದಾರೆ.</p>.<p>ಗೋಣಿಕೊಪ್ಪದಲ್ಲಿ ಹಳೆಯ ಕಟ್ಟಡ ಧರೆಗೆ ಉರುಳಿದ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಹಳೆಯ ಕಟ್ಟಡ ತೆರವಿಗೆ ಕ್ರಮ ಕೈಗೊಂಡಿದೆ.</p>.<p>ಪ್ರಸಕ್ತ ಮಳೆಗಾಲ ಆರಂಭವಾಗಿರುವುದರಿಂದ ಯಾವುದೇ ಸಮಯದಲ್ಲಿ ಬೀಳುವ ಹಂತದಲ್ಲಿದ್ದು, ಕೂಡಲೇ ಕಟ್ಟಡ ತೆರವುಗೊಳಿಸಬೇಕು ಎಂದು ಮಾಲೀಕರಾದ ವೆಳ್ಳಾಪುರ ಸಂಘದ ಅಧ್ಯಕ್ಷ ಎಂ.ಜಿ. ಮಹಮ್ಮದ್ ಖಾಸಿಂ, ಎಂ.ಜಿ. ಅಹ್ಮದ್ ಹುಸೇನ್, ಎಂ.ಜಿ. ಫಜಲುಲ್ ರೆಹಮಾನ್ ಅವರಿಗೆ ಪುರಸಭೆ ಮುಖ್ಯಾಧಿಕಾರಿಗಳು ನೋಟಿಸ್ ನೀಡಿದ್ದಾರೆ.</p>.<p>ಈ ಕಟ್ಟಡದಲ್ಲಿ ಕೆಲವರು ವಾಸವಾಗಿದ್ದು, ಪ್ರಾಣ ಹಾನಿಯಾಗುವ ಸಂಭವವಿರುವುದರಿಂದ ಈ ನೋಟಿಸ್ ತಲುಪಿದ ತಕ್ಷಣ ಕಟ್ಟಡದಲ್ಲಿ ವಾಸವಾಗಿರುವ ಜನರನ್ನು ಖುಲ್ಲಾಪಡಿಸಿ ಕಟ್ಟಡವನ್ನು ತೆರವುಗೊಳಿಸಬೇಕು. ತಪ್ಪಿದಲ್ಲಿ ಮುಂದೆ ಸಂಭವಿಸುವ ಪ್ರಾಣಹಾನಿ ಹಾಗೂ ಕಷ್ಟ ನಷ್ಟಗಳಿಗೆ ನಿಮ್ಮನ್ನೇ ನೇರ ಹೊಣೆಯಾನ್ನಾಗಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>