ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಜಂಟಿಯಾಗಿ ಹಾಡಿಯಲ್ಲಿ ವಾಸ್ತವ್ಯ ಹೂಡಿ, ಗಿರಿಜನರಿಗೆ ಎಲ್ಲಾ ದಾಖಲಾತಿಯನ್ನು ಮಾಡಿಕೊಡಬೇಕು. ತಪ್ಪಿದಲ್ಲಿ ಇವರಿಗೆ ಸರ್ಕಾರಿ ಸೌಲಭ್ಯಗಳು ದೊರೆಯುವುದಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಗಿರಿಜನರು ಅನ್ನಕ್ಕಾಗಿ ಪರದಾಡುವಂತಾಗಿದೆ ಎಂದು ಸದಸ್ಯರಾದ ಗೋಪಾಲಕೃಷ್ಣ, ಶಂಕರ, ಗ್ರಾಮಸ್ಥರಾದ ಎಸ್.ಎಂ.ಕೃಷ್ಣ, ಯೋಗೇಶ್ ದೂರಿದರು.