<p><strong>ಸಿದ್ದಾಪುರ: </strong>ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವೃದ್ಧರೊಬ್ಬರು ಸಾವನ್ನಪ್ಪಿದ ಘಟನೆ ಚೆನ್ನಯ್ಯನಕೋಟೆ ಗ್ರಾಮದಲ್ಲಿ ಸೋಮವಾರ ನಡೆದಿದೆ.</p>.<p>ಚೆನ್ನಯ್ಯನಕೋಟೆ ನಿವಾಸಿ ಎಂ. ಅಪ್ಪಯ್ಯ ಎಂಬುವವರ ಕಾಫಿ ತೋಟದಲ್ಲಿ ಕಾರ್ಮಿಕರಾಗಿದ್ದ ರಾಮು (65) ಅವರು ಕಾಫಿ ತೋಟದ ಕೆರೆಗೆ ಕಾಲು ತೊಳೆಯಲು ಹೋದ ಸಂದರ್ಭದಲ್ಲಿ ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.</p>.<p>ಸ್ಥಳಕ್ಕೆ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ: </strong>ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವೃದ್ಧರೊಬ್ಬರು ಸಾವನ್ನಪ್ಪಿದ ಘಟನೆ ಚೆನ್ನಯ್ಯನಕೋಟೆ ಗ್ರಾಮದಲ್ಲಿ ಸೋಮವಾರ ನಡೆದಿದೆ.</p>.<p>ಚೆನ್ನಯ್ಯನಕೋಟೆ ನಿವಾಸಿ ಎಂ. ಅಪ್ಪಯ್ಯ ಎಂಬುವವರ ಕಾಫಿ ತೋಟದಲ್ಲಿ ಕಾರ್ಮಿಕರಾಗಿದ್ದ ರಾಮು (65) ಅವರು ಕಾಫಿ ತೋಟದ ಕೆರೆಗೆ ಕಾಲು ತೊಳೆಯಲು ಹೋದ ಸಂದರ್ಭದಲ್ಲಿ ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.</p>.<p>ಸ್ಥಳಕ್ಕೆ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>