‘ಗಡಿಯಾಚೆಗೆ ನಡೆಯುತ್ತಿರುವ ನಕ್ಸಲ್ ಚಟುವಟಿಕೆಯ ಪರಿಣಾಮ ರಾಜ್ಯದ ಮೇಲೂ ಆಗುತ್ತಿದ್ದು, ನಿಗಾ ವಹಿಸಲು ಗಡಿ ಜಿಲ್ಲೆಗಳ ಪೊಲೀಸರಿಗೆ ಸೂಚಿಸಲಾಗಿದೆ. ಕೊಡಗಿನಲ್ಲಿ 3ನೇ ಕ್ಯಾಂಪ್ ಸ್ಥಾಪನೆಗೆ ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು. ನ.3ರಂದು ವಯನಾಡು ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಕೊಡಗಿನ ಗಡಿಯಲ್ಲಿ ಶೋಧ ಕಾರ್ಯ ಚುರುಕು ಮಾಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.