ಜಿಲ್ಲೆಯಲ್ಲಿ ಸಂಭವಿಸಿದ 8 ಮೃತ ಪ್ರಕರಣಗಳ ಪೈಕಿ 2 ಪ್ರಕರಣಗಳು ಕೋವಿಡ್ ಆಸ್ಪತ್ರೆಯ ಚಿಕಿತ್ಸಾ ನಿರ್ಧಾರ ಪ್ರದೇಶಕ್ಕೆ ಬಂದ ಒಂದರಿಂದ ಎರಡು ಗಂಟೆ ಅವಧಿಯಲ್ಲಿ ಸಂಭವಿಸಿದೆ. 1 ಪ್ರಕರಣವು ಕೋವಿಡ್ ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆಯೇ ಮೃತಪಟ್ಟ ಪ್ರಕರಣವಾಗಿದೆ. ಮೃತಪಟ್ಟ ಎಲ್ಲಾ ಪ್ರಕರಣಗಳಲ್ಲೂ ಉಸಿರಾಟದ ತೊಂದರೆಯಿದ್ದು, ಕೋವಿಡ್ ಆಸ್ಪತ್ರೆಗೆ ತಡವಾಗಿ ಬಂದ ಪ್ರಕರಣಗಳಾಗಿವೆ. ಉಸಿರಾಟದ ಸಮಸ್ಯೆ ಇರುವವರು ತಕ್ಷಣವೇ ಕೋವಿಡ್ ಆಸ್ಪತ್ರೆಗೆ ಬಂದು ದಾಖಲಾಗಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.