‘ತಲಕಾವೇರಿ ಕ್ಷೇತ್ರ ಬೇರೆ ಕ್ಷೇತ್ರಗಳಂತೆ ಅಲ್ಲ. ತೀರ್ಥರೂಪಿಣಿಯಾದ ಕಾವೇರಿಯನ್ನು ಹಣಕ್ಕೆ ಮಾರಾಟ ಮಾಡುವುದು ಸರಿಯಲ್ಲ. ಕೂಡಲೇ ಅಂಚೆ ಕಚೇರಿಯಿಂದ ಮಾರಾಟ ಮಾಡುವ ಈ ವ್ಯವಸ್ಥೆಯನ್ನು ರದ್ದುಪಡಿಸಬೇಕು. ಇಲ್ಲದಿದ್ದರೆ, ಜಿಲ್ಲಾಧಿಕಾರಿ ಕಚೇರಿ ಮುಂದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು’ ಎಂದು ವೇದಿಕೆಯ ಸಂಚಾಲಕ ಉಳ್ಳಿಯಡ ಎಂ.ಪೂವಯ್ಯ ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.