ಸಮೀಪದ ಆಲೂರು ಸಿದ್ದಾಪುರ ಗ್ರಾಮೀಣ ಪ್ರದೇಶದದಲ್ಲಿ ಜಾನಕಿ ಕಾಳಪ್ಪ ಎಂಬುವರು ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ಸ್ಥಾಪಿಸಿದ್ದು, ಅದರ ಮ್ಯಾನೇಜಿಂಗ್ ಟ್ರಸ್ಟಿಯಾಗಿ ಎಚ್.ಕೆ.ಶಿವಪ್ರಕಾಶ್ ಅವರು ಕೆಲಸ ಮಾಡುತ್ತಿದ್ದರು. ಲಾಕ್ಡೌನ್ನಿಂದ ಶಿಕ್ಷಣ ಸಂಸ್ಥೆ ನಡೆಸಲು ಸಾಧ್ಯವಾಗದೇ ಮುಚ್ಚಲ್ಪಟ್ಟಿತ್ತು. ಶಿಕ್ಷಕರಿಗೆ ವೇತನ ನೀಡಲೂ ಹಣವಿಲ್ಲ. ಈ ಸಮಸ್ಯೆಗೆ ಧೃತಿಗೆಡದೇ ಶಿವಪ್ರಕಾಶ್ ಅವರು, ದಿನಸಿ ಅಂಗಡಿ ತೆರೆದು ವ್ಯಾಪಾರ ಆರಂಭಿಸಿದರೂ ಸಮಸ್ಯೆ ಬಗೆಹರಿಯಲಿಲ್ಲ. ಸಾವಯವ ಗೊಬ್ಬರ ವಿತರಕರಾಗಿ ಆದಾಯ ಗಳಿಸುತ್ತಿದ್ದಾರೆ. ಇದೀಗ ಶಿಕ್ಷಕರಿಗೆ ಸಂಬಳ ನೀಡಿ ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸುತ್ತಾ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.